Andolana originals

ಓದುಗರ ಪತ್ರ: ಮರೆಯಾದ ಹಿರಿಯ ಹಾಸ್ಯ ಕಲಾವಿದ ಉಮೇಶ್

ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.

ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ

೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

10 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

16 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

33 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

39 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

51 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

1 hour ago