ಓದುಗರ ಪತ್ರ
ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.
ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ
೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…