ಓದುಗರ ಪತ್ರ
ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.
ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ
೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…