Andolana originals

ಓದುಗರ ಪತ್ರ: ಮರೆಯಾದ ಹಿರಿಯ ಹಾಸ್ಯ ಕಲಾವಿದ ಉಮೇಶ್

ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.

ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ

೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

10 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

10 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

11 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

11 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

11 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

12 hours ago