Andolana originals

ಓದುಗರ ಪತ್ರ: ವಿದೇಶಿ ನಕಲಿ ಜಾಬ್ ಆಫರ್ : ಜಾಗೃತಿ ಅತ್ಯಗತ್ಯ

ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ.

ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ ಕೆಲಸದ ಆಫರ್‌ಗಳ ಮೂಲಕ ಕಳೆದುಕೊಂಡಿದ್ದಾರೆ. ಕೆಲವೊಮ್ಮೆ ವಂಚಕರು ವಿದೇಶಗಳಲ್ಲಿ ಕೆಲಸದ ಹೆಸರಿನಲ್ಲಿ ಜನರನ್ನು ಸೈಬರ್ ದಾಸ್ಯಕ್ಕೆ ಸಿಲುಕಿಸುತ್ತಾರೆ.

ವಂಚಕರು ಸಿಂಗಪೂರ್, ಥಾಯ್‌ಲ್ಯಾಂಡ್, ದುಬೈ ಮುಂತಾದ ದೇಶಗಳಲ್ಲಿ ಹೆಚ್ಚಿನ ಸಂಬಳದ ಕೆಲಸ ಕೊಡಿಸುವುದಾಗಿ ಹಾಗೂ ‘ವೀಸಾ ಪ್ರಕ್ರಿಯೆ’ ಅಥವಾ ‘ ತರಬೇತಿ ಶುಲ್ಕ’ದ ಹೆಸರಿನಲ್ಲಿ ಹಣ ಪಡೆದು ನಂತರ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಜನರನ್ನು ವಿದೇಶಗಳಿಗೆ ಕಳುಹಿಸಿ ಸೈಬರ್ ಅಪರಾಧ ಅಥವಾ ಬಲವಂತದ ಕಾರ್ಮಿಕತ್ವಕ್ಕೆ ಒಳಪಡಿಸುತ್ತಾರೆ. ಇಂತಹ ವಂಚನೆಗಳು ಕೇವಲ ಆರ್ಥಿಕ ನಷ್ಟವಷ್ಟೇ ಅಲ್ಲ, ಮಾನಸಿಕ ನೋವಿಗೂ ಕಾರಣವಾಗುತ್ತವೆ. ಆದ್ದರಿಂದ ಸರ್ಕಾರ ಜನಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ. ಯಾವುದೇ ಕೆಲಸಕ್ಕಾಗಿ ಮೊದಲು ಹಣ ಕೇಳಿದರೆ ಅಥವಾ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ ತಕ್ಷಣ ಅಧಿಕೃತ ಸಂಸ್ಥೆಗಳ ಮೂಲಕ ಪರಿಶೀಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ವಂಚನೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

24 mins ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

34 mins ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

44 mins ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

52 mins ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…

1 hour ago