Andolana originals

ಓದುಗರ ಪತ್ರ: ವಿದೇಶಿ ನಕಲಿ ಜಾಬ್ ಆಫರ್ : ಜಾಗೃತಿ ಅತ್ಯಗತ್ಯ

ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ.

ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ ಕೆಲಸದ ಆಫರ್‌ಗಳ ಮೂಲಕ ಕಳೆದುಕೊಂಡಿದ್ದಾರೆ. ಕೆಲವೊಮ್ಮೆ ವಂಚಕರು ವಿದೇಶಗಳಲ್ಲಿ ಕೆಲಸದ ಹೆಸರಿನಲ್ಲಿ ಜನರನ್ನು ಸೈಬರ್ ದಾಸ್ಯಕ್ಕೆ ಸಿಲುಕಿಸುತ್ತಾರೆ.

ವಂಚಕರು ಸಿಂಗಪೂರ್, ಥಾಯ್‌ಲ್ಯಾಂಡ್, ದುಬೈ ಮುಂತಾದ ದೇಶಗಳಲ್ಲಿ ಹೆಚ್ಚಿನ ಸಂಬಳದ ಕೆಲಸ ಕೊಡಿಸುವುದಾಗಿ ಹಾಗೂ ‘ವೀಸಾ ಪ್ರಕ್ರಿಯೆ’ ಅಥವಾ ‘ ತರಬೇತಿ ಶುಲ್ಕ’ದ ಹೆಸರಿನಲ್ಲಿ ಹಣ ಪಡೆದು ನಂತರ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಜನರನ್ನು ವಿದೇಶಗಳಿಗೆ ಕಳುಹಿಸಿ ಸೈಬರ್ ಅಪರಾಧ ಅಥವಾ ಬಲವಂತದ ಕಾರ್ಮಿಕತ್ವಕ್ಕೆ ಒಳಪಡಿಸುತ್ತಾರೆ. ಇಂತಹ ವಂಚನೆಗಳು ಕೇವಲ ಆರ್ಥಿಕ ನಷ್ಟವಷ್ಟೇ ಅಲ್ಲ, ಮಾನಸಿಕ ನೋವಿಗೂ ಕಾರಣವಾಗುತ್ತವೆ. ಆದ್ದರಿಂದ ಸರ್ಕಾರ ಜನಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ. ಯಾವುದೇ ಕೆಲಸಕ್ಕಾಗಿ ಮೊದಲು ಹಣ ಕೇಳಿದರೆ ಅಥವಾ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ ತಕ್ಷಣ ಅಧಿಕೃತ ಸಂಸ್ಥೆಗಳ ಮೂಲಕ ಪರಿಶೀಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ವಂಚನೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

2 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

2 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

3 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

3 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

3 hours ago