Andolana originals

ಓದುಗರ ಪತ್ರ: ವಿದೇಶಿ ನಕಲಿ ಜಾಬ್ ಆಫರ್ : ಜಾಗೃತಿ ಅತ್ಯಗತ್ಯ

ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ.

ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ ಕೆಲಸದ ಆಫರ್‌ಗಳ ಮೂಲಕ ಕಳೆದುಕೊಂಡಿದ್ದಾರೆ. ಕೆಲವೊಮ್ಮೆ ವಂಚಕರು ವಿದೇಶಗಳಲ್ಲಿ ಕೆಲಸದ ಹೆಸರಿನಲ್ಲಿ ಜನರನ್ನು ಸೈಬರ್ ದಾಸ್ಯಕ್ಕೆ ಸಿಲುಕಿಸುತ್ತಾರೆ.

ವಂಚಕರು ಸಿಂಗಪೂರ್, ಥಾಯ್‌ಲ್ಯಾಂಡ್, ದುಬೈ ಮುಂತಾದ ದೇಶಗಳಲ್ಲಿ ಹೆಚ್ಚಿನ ಸಂಬಳದ ಕೆಲಸ ಕೊಡಿಸುವುದಾಗಿ ಹಾಗೂ ‘ವೀಸಾ ಪ್ರಕ್ರಿಯೆ’ ಅಥವಾ ‘ ತರಬೇತಿ ಶುಲ್ಕ’ದ ಹೆಸರಿನಲ್ಲಿ ಹಣ ಪಡೆದು ನಂತರ ಸಂಪರ್ಕಕ್ಕೆ ಸಿಗದೆ ಪರಾರಿಯಾಗುತ್ತಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಜನರನ್ನು ವಿದೇಶಗಳಿಗೆ ಕಳುಹಿಸಿ ಸೈಬರ್ ಅಪರಾಧ ಅಥವಾ ಬಲವಂತದ ಕಾರ್ಮಿಕತ್ವಕ್ಕೆ ಒಳಪಡಿಸುತ್ತಾರೆ. ಇಂತಹ ವಂಚನೆಗಳು ಕೇವಲ ಆರ್ಥಿಕ ನಷ್ಟವಷ್ಟೇ ಅಲ್ಲ, ಮಾನಸಿಕ ನೋವಿಗೂ ಕಾರಣವಾಗುತ್ತವೆ. ಆದ್ದರಿಂದ ಸರ್ಕಾರ ಜನಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅಗತ್ಯ. ಯಾವುದೇ ಕೆಲಸಕ್ಕಾಗಿ ಮೊದಲು ಹಣ ಕೇಳಿದರೆ ಅಥವಾ ವೈಯಕ್ತಿಕ ಮಾಹಿತಿಯನ್ನು ಕೇಳಿದರೆ ತಕ್ಷಣ ಅಧಿಕೃತ ಸಂಸ್ಥೆಗಳ ಮೂಲಕ ಪರಿಶೀಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ವಂಚನೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

13 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

44 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago