Andolana originals

ಓದುಗರ ಪತ್ರ: ಭ್ರೂಣಹತ್ಯೆ: ಕಠಿಣ ಶಿಕ್ಷೆಯಾಗಲಿ

ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ವರದಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೇ ಭಾಗಿಯಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ದುಷ್ಕೃತ್ಯವೆಸಗುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.

ಭ್ರೂಣ ಹತ್ಯೆಯಿಂದಾಗಿ ರಾಜ್ಯದ ಸುಮಾರು ೧೪ ಜಿಲ್ಲೆಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳ ಅನುಪಾತದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿದೆ. ಬಾಗಲಕೋಟೆ, ಬಿಜಾಪುರ, ವಿಜಯ ಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ, ೧೦೦೦ ಗಂಡು ಮಕ್ಕಳಿಗೆ ಕೇವಲ ೬೨೪ ರಿಂದ ೭೫೦ ಹೆಣ್ಣು ಮಕ್ಕಳಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸವಾಗುತ್ತದೆ.

ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳಲ್ಲಿ ಸರ್ಕಾರ ಯಾವ ಕಾನೂನು ಕ್ರಮ ಕೈಗೊಂಡಿದೆ , ಯಾರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು. ಭ್ರೂಣಹತ್ಯೆ ನಿಷೇಧ ಕಾನೂನಿನ ಪ್ರಕಾರ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಮಾಡುವವರಿಗೆ, ಮೂರರಿಂದ ಐದು ವರ್ಷಗಳ ಕಾಲ ಜೈಲು ಶಿಕ್ಷೆ, ೧೦ರಿಂದ ೫೦ ಸಾವಿರ ರೂ. ವರೆಗೆ ದಂಡ, ಮತ್ತು ಅವರ ವೈದ್ಯಕೀಯ ಪರವಾನಗಿಯನ್ನು ರದ್ದು ಪಡಿಸಿ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.

ಆದರೆ ಈ ಕಾನೂನು ಜಾರಿಗೆ ಬಂದು ೩೦ ವರ್ಷಗಳಾದರೂ, ಇದುವರೆಗೂ ಒಬ್ಬರಿಗೂ, ಶಿಕ್ಷೆ ಯಾಗಿರುವ ಉದಾಹಣೆಗಳು ಇಲ್ಲ. ಕಠಿಣ ಕಾನೂನುಗಳನ್ನು ಜಾರಿ ಮಾಡುವುದಷ್ಟೇ ಅಲ್ಲ ಸಮರ್ಪಕವಾಗಿ ಅನುಷ್ಠಾನಗೊಳಿಸುವುದೂ ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕರೂ ಇದಕ್ಕೆ ಸಹಕರಿಸಿದರೆ ಭ್ರೂಣ ಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago