ಓದುಗರ ಪತ್ರ
ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ವರದಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೇ ಭಾಗಿಯಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ದುಷ್ಕೃತ್ಯವೆಸಗುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.
ಭ್ರೂಣ ಹತ್ಯೆಯಿಂದಾಗಿ ರಾಜ್ಯದ ಸುಮಾರು ೧೪ ಜಿಲ್ಲೆಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳ ಅನುಪಾತದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿದೆ. ಬಾಗಲಕೋಟೆ, ಬಿಜಾಪುರ, ವಿಜಯ ಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ, ೧೦೦೦ ಗಂಡು ಮಕ್ಕಳಿಗೆ ಕೇವಲ ೬೨೪ ರಿಂದ ೭೫೦ ಹೆಣ್ಣು ಮಕ್ಕಳಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸವಾಗುತ್ತದೆ.
ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳಲ್ಲಿ ಸರ್ಕಾರ ಯಾವ ಕಾನೂನು ಕ್ರಮ ಕೈಗೊಂಡಿದೆ , ಯಾರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು. ಭ್ರೂಣಹತ್ಯೆ ನಿಷೇಧ ಕಾನೂನಿನ ಪ್ರಕಾರ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಮಾಡುವವರಿಗೆ, ಮೂರರಿಂದ ಐದು ವರ್ಷಗಳ ಕಾಲ ಜೈಲು ಶಿಕ್ಷೆ, ೧೦ರಿಂದ ೫೦ ಸಾವಿರ ರೂ. ವರೆಗೆ ದಂಡ, ಮತ್ತು ಅವರ ವೈದ್ಯಕೀಯ ಪರವಾನಗಿಯನ್ನು ರದ್ದು ಪಡಿಸಿ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.
ಆದರೆ ಈ ಕಾನೂನು ಜಾರಿಗೆ ಬಂದು ೩೦ ವರ್ಷಗಳಾದರೂ, ಇದುವರೆಗೂ ಒಬ್ಬರಿಗೂ, ಶಿಕ್ಷೆ ಯಾಗಿರುವ ಉದಾಹಣೆಗಳು ಇಲ್ಲ. ಕಠಿಣ ಕಾನೂನುಗಳನ್ನು ಜಾರಿ ಮಾಡುವುದಷ್ಟೇ ಅಲ್ಲ ಸಮರ್ಪಕವಾಗಿ ಅನುಷ್ಠಾನಗೊಳಿಸುವುದೂ ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕರೂ ಇದಕ್ಕೆ ಸಹಕರಿಸಿದರೆ ಭ್ರೂಣ ಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…