ಓದುಗರ ಪತ್ರ
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ ಮಾತನ್ನು ಅಷ್ಟೇ ಧೈರ್ಯವಾಗಿ ಈಗಿನ ಕಾಲಘಟ್ಟದಲ್ಲಿ ಹೇಳಲು ಸ್ವಲ್ಪ ಕಷ್ಟವೆನ್ನಬಹುದು. ಅದಕ್ಕೆ ಇತ್ತೀಚಿಗಿನ ಘಟನಾವಳಿಗಳನ್ನು ಮಾಧ್ಯಮಗಳಲ್ಲಿ ಗಮನಿಸುವವರಿಗೆ ಬೇಗ ಅರ್ಥವಾಗುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಅದರಲ್ಲೂ ಸರ್ಕಾರಿ ಸೇವೆಯಲ್ಲಿರುವ ಅನೇಕ ಮಹಿಳೆಯರಿಗೆ ಭ್ರಷ್ಟಾಚಾರದ ಮಸಿ ಅಂಟಿಕೊಳ್ಳುತ್ತಿರುವುದು ಆತಂಕ ಹುಟ್ಟಿಸುತ್ತಿದೆ. ತೀರಾ ಇತ್ತೀಚೆಗೆ, ಕರ್ನಾಟಕ ಆಡಳಿತ ಸೇವೆಯ ಮಹಿಳಾ ಅಧಿಕಾರಿಯೊಬ್ಬರು ಐದು ಲಕ್ಷ ರೂಪಾಯಿಗಳನ್ನು ಬೆಂಗಳೂರಿನ ಮತ್ತೊರ್ವ ಮಹಿಳಾ ವೈದ್ಯರಿಂದ ಲಂಚವಾಗಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ.
ಮಹಿಳೆಯರು, ಪುರುಷರಿಗಿಂತ ಸೂಕ್ಷ್ಮಮತಿಗಳಾಗಿರುತ್ತಾರೆ ಹಾಗೂ ಸಂವೇದನಾಶೀಲರಾಗಿರುತ್ತಾರೆ. ಲಂಚ, ಭ್ರಷ್ಟಾಚಾರ ಮುಂತಾದವುಗಳು ಅವರ ಹತ್ತಿರವೂ ಸುಳಿಯುವುದಿಲ್ಲ. ಎಂಬ ಸಾರ್ವತ್ರಿಕ ಭಾವನೆ ಸುಳ್ಳಾಗುತ್ತಿದೆ. ಇನ್ನು ಮುಂದಾದರೂ ಮಹಿಳಾ ನೌಕರರು ಅಥವಾ ಅಧಿಕಾರಿಗಳು ಲಂಚದಿಂದ ಅಂತರ ಕಾಪಾಡಿಕೊಳ್ಳುವುದು ಅವರವರ ವೈಯಕ್ತಿಕ ಹಿತದೃಷ್ಟಿಯಿಂದ ಹಾಗೂ ಆರೋಗ್ಯಕರ ಸಮಾಜದ ದೃಷ್ಟಿಯಿಂದ ಅಗತ್ಯವಾಗಿದೆ.
-ಕೆ.ವಿ.ವಾಸು, ಮೈಸೂರು
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…