ಓದುಗರ ಪತ್ರ
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು ಬರುತ್ತಿತ್ತು. ಉದಾಹರಣೆಗೆ ಬಾಗೂರು, ಕೂಡ್ಲಾಪುರ, ತರದಲೆ, ಮಲ್ಲಹಳ್ಳಿ, ಹೆಮ್ಮರಗಾಲ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ದೊರೆಯುತ್ತಿತ್ತು. ಈಗ ಅಣೆಕಟ್ಟೆ ನೀರು ನಿಲ್ಲದೆ ಮಳೆ ಬಂದರೆ ಬೇರೆ ಕಡೆ ಹರಿದು ಹೋಗುತ್ತಿದೆ. ದಾರಿ ಉದ್ದಕ್ಕೂ ನೀರು ಹರಿಯುತ್ತಿದ್ದ ಗುಂಡಿಗಳು ಮುಚ್ಚಿಹೋಗಿವೆ. ಹೂಳು ತೆಗೆಸಬೇಕಾಗಿದೆ. ನೀರು ದೊರೆಯುತ್ತಿದ್ದ ಸಂದರ್ಭದಲ್ಲಿ ರೈತರು ಪ್ರತಿ ವರ್ಷ ಎರಡು ಬೆಳೆಗಳನ್ನು ತೆಗೆಯುತ್ತಿದ್ದರು. ಆದರೆ ಈಗ ಒಂದು ಬೆಳೆಯನ್ನೂ ತೆಗೆಯಲಾರದೆ ಕೂಲಿನಾಲಿಗಾಗಿ ಬೇರೆಕಡೆ ಹೋಗುವ ಪರಿಸ್ಥಿತಿ ಉಂಟಾಗಿದೆ. ದನಕರುಗಳಿಗೂ ಕುಡಿಯಲು ನೀರಿಲ್ಲ, ಮೇವಿಗೂ ಸಮಸ್ಯೆ ಉಂಟಾಗಿದೆ.
ಈ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಽಕಾರಿಗಳು ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ ಹರಿಯುವಂತೆ ಮಾಡಿ, ಹಳ್ಳಿಗಳಿಗೆ ಮತ್ತು ಸುತ್ತಮುತ್ತಲ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತಾದರೆ ರೈತರಿಗಲ್ಲದೆ ಜನಸಾಮಾನ್ಯರಿಗೂ ಅನುಕೂಲವಾಗುತ್ತದೆ.
-ಕೆ.ಪಿ. ಬಸವಯ್ಯ, ಮೈಸೂರು
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…
ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…