ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು ನಕಲಿ ಮತದಾನ ತಡೆಯಲು ತಂತ್ರಜ್ಞಾನ ಅನಿವಾರ್ಯ. ಆದರೆ ಕೇವಲ ಯಂತ್ರಗಳ ಮೇಲೆ ಅವಲಂಬಿತವಾಗುವುದು ಅಪಾಯಕಾರಿ. ತಾಂತ್ರಿಕ ದೋಷದಿಂದ ಒಬ್ಬನೇ ಒಬ್ಬ ಅರ್ಹ ಮತದಾರನಿಗೆ ಹಕ್ಕು ನಿರಾಕರಣೆಯಾದರೂ ಅದು ಸಂವಿಧಾನಕ್ಕೆ ಮಾಡುವ ದ್ರೋಹ. ಗೌಪ್ಯತೆ ಮತ್ತು ಭದ್ರತೆಯ ನಡುವಿನ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ. ಬೆರಳಚ್ಚು ಪ್ರಜೆಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಾಧನವಾಗಬಾರದು. ಡಿಜಿಟಲ್ ಇಂಡಿಯಾದಲ್ಲಿ ಪಾರದರ್ಶಕತೆ ಬೇಕು. ಆದರೆ ಅದು ಬಡವರ ಮತ್ತು ತಾಂತ್ರಿಕ ಜ್ಞಾನವಿಲ್ಲದವರ ಮತದಾನದ ಹಕ್ಕನ್ನು ಕಸಿದುಕೊಳ್ಳಬಾರದು. ವ್ಯವಸ್ಥೆಯ ಸುಧಾರಣೆ ಹೆಸರಿನಲ್ಲಿ ಪ್ರಜಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ಎಚ್ಚರವಹಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಹೀಗಾಗಿ ಮತದಾನ ಸಮಯದಲ್ಲಿ ಬೆರಳಚ್ಚು ಕಡ್ಡಾಯಗೊಳ್ಳಲಿ.
– ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…