Andolana originals

ಓದುಗರ ಪತ್ರ:  ಹುಲಿಗಳಿಗೆ ರೇಡಿಯೋ ಕಾಲರ್ ಅಳವಡಿಸಿ

ಕಳೆದ ಎರಡು ತಿಂಗಳಿಂದೀಚೆಗೆ ಮೈಸೂರು ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ, ಹುಣಸೂರು ತಾಲ್ಲೂಕು ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಇದರಿಂದ ರೈತರು ಹೊಲ ಗದ್ದೆಗಳಲ್ಲಿ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ. ಅರಣ್ಯ ಇಲಾಖೆಯವರು ಉಪಟಳ ನೀಡುವ ಹುಲಿಗಳನ್ನು ಸೆರೆ ಹಿಡಿದು ಮೈಸೂರಿನ ಕೂರ್ಗಳ್ಳಿಯ ಪುನರ್ವಸತಿ ಕೇಂದ್ರಕ್ಕೆ ಬಿಡುತ್ತಿದ್ದಾರೆ. ಕೆಲ ದಿನಗಳ ನಂತರ ಇಂತಹ ಹುಲಿಗಳನ್ನು ಮತ್ತೆ ಕಾಡಿಗೆ ಬಿಡಲಾಗುವುದು ಎಂದು ಅರಣ್ಯಾಽಕಾರಿಗಳು ಹೇಳಿದ್ದಾರೆ. ಸೆರೆ ಹಿಡಿದ ಹುಲಿಗಳನ್ನು ಮರಳಿ ಕಾಡಿಗೆ ಬಿಟ್ಟರೆ ಅವು ಮತ್ತೆ ಜನವಸತಿ ಪ್ರದೇಶಕ್ಕೆ ಬಂದು ದಾಳಿ ಮಾಡುವ ಸಾಧ್ಯತೆಗಳಿವೆ. ಅರಣ್ಯ ಇಲಾಖೆಯವರು ಹುಲಿಗಳನ್ನು ಬೇರೆ ರಾಜ್ಯಗಳ ಮೃಗಾಲಯಗಳಿಗೆ ಪ್ರಾಣಿ ವಿನಿಮಯ ಯೋಜನೆಯಡಿ ನೀಡಬಹುದು. ಮರಳಿ ಕಾಡಿಗೆ ಬಿಡುವುದೇ ಆದರೆ ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಬಿಡಲಿ. ಆಗ ಅವುಗಳ ಚಲನ ವಲನಗಳನ್ನು ಸುಲಭವಾಗಿ ತಿಳಿದು ಅವುಗಳ ಇರುವಿಕೆಯನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಹುಲಿಗಳ ದಾಳಿಯನ್ನು ತಪ್ಪಿಸಬಹುದಾಗಿದೆ.

 -ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

1 hour ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago