ಓದುಗರ ಪತ್ರ
ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು ಸುತ್ತಿಗೆಯಿಂದ ಹೊಡೆದು ಬಾಗಿಸಬೇಕು.
ಆದರೆ ಬಾಗಿಸದೇ ಹಾಗೇ ಬಿಟ್ಟಿರುವುದರಿಂದ -ಫುಟ್ಪಾತ್ನಲ್ಲಿ ಸಂಚರಿಸುವವರು ಸ್ಲ್ಯಾಬ್ನ ಕಬ್ಬಿಣದ ಹಿಡಿಕೆಯನ್ನು ಕಾಲಿಗೆ ಬಡಿಸಿಕೊಂಡು ಗಾಯಗೊಳ್ಳುತ್ತಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಕ್ರಮವಹಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಶರತ್, ಮೈಸೂರು
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…