Andolana originals

ಓದುಗರ ಪತ್ರ: ಎಂಡಿಎ ನಿವೇಶನಗಳಿಗೆ ಕನಿಷ್ಠ/ ಗರಿಷ್ಟ ಮೊತ್ತ ನಿಗದಿ ಮಾಡಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ.  ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು ಪ್ರತಿ ಸ್ಪರ್ಧಿಗಳು ಮುಂದೆ ಬಂದರೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡುವುದು ಉತ್ತಮ.

ಕಳೆದ ತಿಂಗಳು ೨ ಕೋಟಿ ರೂಪಾಯಿಗೆ ನಿವೇಶನ ಹರಾಜಾಗಿದ್ದು, ಮೈಸೂರಿನ ಪ್ರತಿಯೊಬ್ಬ ನಾಗರಿಕರನ್ನೂ ಹುಬ್ಬೇರಿಸುವಂತೆ ಮಾಡಿತ್ತು. ಸಾಮಾನ್ಯ ಜನತೆಗೆ ಸೂರು ಸಿಗಬೇಕು ಎಂಬ ಆಶಯದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದ ಈ ಸಂಸ್ಥೆ ಎತ್ತ ಸಾಗುತ್ತಿದೆ ಎಂಬುದಕ್ಕೆ ಉತ್ತರವೇ ಇಲ್ಲದಂತಾಗಿದೆ. ಎಂಡಿಎ ಖಾಸಗಿ ಗೃಹ ನಿರ್ಮಾಣ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ಕೊಡುವ ಬದಲು, ನೇರವಾಗಿ ಜನರಿಂದ ಜಮೀನನ್ನು ಖರೀದಿ ಮಾಡಿ, ಹಲವಾರು ವರ್ಷಗಳಿಂದ ಚಾತಕ ಪಕ್ಷಿಯಂತೆ ನಿವೇಶನಗಳಿಗಾಗಿ ಅರ್ಜಿಯನ್ನು ಹಾಕಿ ಕಾಯುತ್ತಿರುವ ಸಾಮಾನ್ಯ ನಾಗರಿಕರಿಗೆ ಹಂಚಿಕೆ ಮಾಡಿದರೆ ನಿವೇಶನದ ಭಾಗ್ಯ ನೀಡಿದಂತಾಗುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಕುರಿತುಕ್ರಮ ವಹಿಸಲಿ

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

8 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

10 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

10 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago