Andolana originals

ಓದುಗರ ಪತ್ರ: ಎಂಡಿಎ ನಿವೇಶನಗಳಿಗೆ ಕನಿಷ್ಠ/ ಗರಿಷ್ಟ ಮೊತ್ತ ನಿಗದಿ ಮಾಡಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ.  ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು ಪ್ರತಿ ಸ್ಪರ್ಧಿಗಳು ಮುಂದೆ ಬಂದರೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡುವುದು ಉತ್ತಮ.

ಕಳೆದ ತಿಂಗಳು ೨ ಕೋಟಿ ರೂಪಾಯಿಗೆ ನಿವೇಶನ ಹರಾಜಾಗಿದ್ದು, ಮೈಸೂರಿನ ಪ್ರತಿಯೊಬ್ಬ ನಾಗರಿಕರನ್ನೂ ಹುಬ್ಬೇರಿಸುವಂತೆ ಮಾಡಿತ್ತು. ಸಾಮಾನ್ಯ ಜನತೆಗೆ ಸೂರು ಸಿಗಬೇಕು ಎಂಬ ಆಶಯದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದ ಈ ಸಂಸ್ಥೆ ಎತ್ತ ಸಾಗುತ್ತಿದೆ ಎಂಬುದಕ್ಕೆ ಉತ್ತರವೇ ಇಲ್ಲದಂತಾಗಿದೆ. ಎಂಡಿಎ ಖಾಸಗಿ ಗೃಹ ನಿರ್ಮಾಣ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ಕೊಡುವ ಬದಲು, ನೇರವಾಗಿ ಜನರಿಂದ ಜಮೀನನ್ನು ಖರೀದಿ ಮಾಡಿ, ಹಲವಾರು ವರ್ಷಗಳಿಂದ ಚಾತಕ ಪಕ್ಷಿಯಂತೆ ನಿವೇಶನಗಳಿಗಾಗಿ ಅರ್ಜಿಯನ್ನು ಹಾಕಿ ಕಾಯುತ್ತಿರುವ ಸಾಮಾನ್ಯ ನಾಗರಿಕರಿಗೆ ಹಂಚಿಕೆ ಮಾಡಿದರೆ ನಿವೇಶನದ ಭಾಗ್ಯ ನೀಡಿದಂತಾಗುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಕುರಿತುಕ್ರಮ ವಹಿಸಲಿ

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

6 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

10 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

28 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

31 mins ago

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

1 hour ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

2 hours ago