Andolana originals

ಓದುಗರ ಪತ್ರ: ಎಂಡಿಎ ನಿವೇಶನಗಳಿಗೆ ಕನಿಷ್ಠ/ ಗರಿಷ್ಟ ಮೊತ್ತ ನಿಗದಿ ಮಾಡಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ.  ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು ಪ್ರತಿ ಸ್ಪರ್ಧಿಗಳು ಮುಂದೆ ಬಂದರೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡುವುದು ಉತ್ತಮ.

ಕಳೆದ ತಿಂಗಳು ೨ ಕೋಟಿ ರೂಪಾಯಿಗೆ ನಿವೇಶನ ಹರಾಜಾಗಿದ್ದು, ಮೈಸೂರಿನ ಪ್ರತಿಯೊಬ್ಬ ನಾಗರಿಕರನ್ನೂ ಹುಬ್ಬೇರಿಸುವಂತೆ ಮಾಡಿತ್ತು. ಸಾಮಾನ್ಯ ಜನತೆಗೆ ಸೂರು ಸಿಗಬೇಕು ಎಂಬ ಆಶಯದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದ ಈ ಸಂಸ್ಥೆ ಎತ್ತ ಸಾಗುತ್ತಿದೆ ಎಂಬುದಕ್ಕೆ ಉತ್ತರವೇ ಇಲ್ಲದಂತಾಗಿದೆ. ಎಂಡಿಎ ಖಾಸಗಿ ಗೃಹ ನಿರ್ಮಾಣ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ಕೊಡುವ ಬದಲು, ನೇರವಾಗಿ ಜನರಿಂದ ಜಮೀನನ್ನು ಖರೀದಿ ಮಾಡಿ, ಹಲವಾರು ವರ್ಷಗಳಿಂದ ಚಾತಕ ಪಕ್ಷಿಯಂತೆ ನಿವೇಶನಗಳಿಗಾಗಿ ಅರ್ಜಿಯನ್ನು ಹಾಕಿ ಕಾಯುತ್ತಿರುವ ಸಾಮಾನ್ಯ ನಾಗರಿಕರಿಗೆ ಹಂಚಿಕೆ ಮಾಡಿದರೆ ನಿವೇಶನದ ಭಾಗ್ಯ ನೀಡಿದಂತಾಗುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಕುರಿತುಕ್ರಮ ವಹಿಸಲಿ

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago