ಓದುಗರ ಪತ್ರ
ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ. ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು ಪ್ರತಿ ಸ್ಪರ್ಧಿಗಳು ಮುಂದೆ ಬಂದರೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡುವುದು ಉತ್ತಮ.
ಕಳೆದ ತಿಂಗಳು ೨ ಕೋಟಿ ರೂಪಾಯಿಗೆ ನಿವೇಶನ ಹರಾಜಾಗಿದ್ದು, ಮೈಸೂರಿನ ಪ್ರತಿಯೊಬ್ಬ ನಾಗರಿಕರನ್ನೂ ಹುಬ್ಬೇರಿಸುವಂತೆ ಮಾಡಿತ್ತು. ಸಾಮಾನ್ಯ ಜನತೆಗೆ ಸೂರು ಸಿಗಬೇಕು ಎಂಬ ಆಶಯದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದ ಈ ಸಂಸ್ಥೆ ಎತ್ತ ಸಾಗುತ್ತಿದೆ ಎಂಬುದಕ್ಕೆ ಉತ್ತರವೇ ಇಲ್ಲದಂತಾಗಿದೆ. ಎಂಡಿಎ ಖಾಸಗಿ ಗೃಹ ನಿರ್ಮಾಣ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ಕೊಡುವ ಬದಲು, ನೇರವಾಗಿ ಜನರಿಂದ ಜಮೀನನ್ನು ಖರೀದಿ ಮಾಡಿ, ಹಲವಾರು ವರ್ಷಗಳಿಂದ ಚಾತಕ ಪಕ್ಷಿಯಂತೆ ನಿವೇಶನಗಳಿಗಾಗಿ ಅರ್ಜಿಯನ್ನು ಹಾಕಿ ಕಾಯುತ್ತಿರುವ ಸಾಮಾನ್ಯ ನಾಗರಿಕರಿಗೆ ಹಂಚಿಕೆ ಮಾಡಿದರೆ ನಿವೇಶನದ ಭಾಗ್ಯ ನೀಡಿದಂತಾಗುತ್ತದೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಕುರಿತುಕ್ರಮ ವಹಿಸಲಿ
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…