Andolana originals

ಓದುಗರ ಪತ್ರ: ಚೆಲುವಾಂಬ ಆಸ್ಪತ್ರೆ ಅವ್ಯವಸ್ಥ ಸರಿಪಡಿಸಿ

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ ವೈದ್ಯರಿದ್ದಲ್ಲಿಗೆ ತೆಗೆದು ಕೊಂಡು ಹೋಗಿ ತಪಾಸಣೆಗೊಳಪಡಿಸುವ ಸ್ಥಿತಿ ನಿರ್ಮಾಣ ವಾಗಿದೆ. ಹೆರಿಗೆಯಾದವರನ್ನೂ ವಿವಿಧ ಪರೀಕ್ಷೆಗಾಗಿ ವಿವಿಧ ಕೊಠಡಿಗಳಿಗೆ ಅಲೆದಾಡಿಸುತ್ತಾರೆ. ಇದರಿಂದ ಸಿಸೇರಿಯನ್ ಹೆರಿಗೆಯಾದವರಿಗಂತೂ ತುಂಬಾ ತೊಂದರೆಯಾಗುತ್ತಿದೆ. ನಿಯಮಾನುಸಾರ ವೈದ್ಯರು ರೋಗಿಗಳಿದ್ದಲ್ಲಿಗೇ ಬಂದು ತಪಾಸಣೆ ಮಾಡಬೇಕು ಎಂಬ ಅರಿವೂ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ.

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ಜಾಗವಿಲ್ಲದೆ ಆಸ್ಪತ್ರೆಯ ಆವರಣದಲ್ಲೇ ರಾತ್ರಿ ವೇಳೆ ಚಳಿಯಲ್ಲಿ ಮಲಗುವುದು ಅನಿವಾರ್ಯವಾಗಿದೆ. ರಾತ್ರಿ ಇಲಿ, ಹೆಗ್ಗಣಗಳ ಕಾಟ ಒಂದೆಡೆಯಾದರೆ ದುಷ್ಕರ್ಮಿಗಳು ಚಾಕು ತೋರಿಸಿ ಹಣ ಮೊಬೈಲ್ ದೋಚುತ್ತಿರುವುದು ಮತ್ತೊಂದೆಡೆಯಾಗಿದೆ.

ಆಸ್ಪತ್ರೆಯ ಆವರಣದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ದುಷ್ಕರ್ಮಿಗಳಿಗೆ ಅನುಕೂಲವಾಗಿದೆ. ಆಸ್ಪತ್ರೆಗೆ ಬರುವವರು ಬಹುತೇಕ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮವರ್ಗದವರೇ ಆಗಿರುವುದರಿಂದ ಅವರ ಬಳಿ ಇದ್ದ ಹಣ, ಮೊಬೈಲ್ ದೋಚಿದರೆ ಯಾರು ಹೊಣೆ ?

ಇನ್ನು ಮುಂದಾದರೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಆಸ್ಪತ್ರೆಯ ಆವರಣದಲ್ಲಿ ರಾತ್ರಿ ವೇಳೆ ಪೊಲೀಸರನ್ನು ನಿಯೋಜಿಸಬೇಕು. ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

52 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

1 hour ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago