Andolana originals

ಓದುಗರ ಪತ್ರ: ಚೆಲುವಾಂಬ ಆಸ್ಪತ್ರೆ ಅವ್ಯವಸ್ಥ ಸರಿಪಡಿಸಿ

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ ವೈದ್ಯರಿದ್ದಲ್ಲಿಗೆ ತೆಗೆದು ಕೊಂಡು ಹೋಗಿ ತಪಾಸಣೆಗೊಳಪಡಿಸುವ ಸ್ಥಿತಿ ನಿರ್ಮಾಣ ವಾಗಿದೆ. ಹೆರಿಗೆಯಾದವರನ್ನೂ ವಿವಿಧ ಪರೀಕ್ಷೆಗಾಗಿ ವಿವಿಧ ಕೊಠಡಿಗಳಿಗೆ ಅಲೆದಾಡಿಸುತ್ತಾರೆ. ಇದರಿಂದ ಸಿಸೇರಿಯನ್ ಹೆರಿಗೆಯಾದವರಿಗಂತೂ ತುಂಬಾ ತೊಂದರೆಯಾಗುತ್ತಿದೆ. ನಿಯಮಾನುಸಾರ ವೈದ್ಯರು ರೋಗಿಗಳಿದ್ದಲ್ಲಿಗೇ ಬಂದು ತಪಾಸಣೆ ಮಾಡಬೇಕು ಎಂಬ ಅರಿವೂ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ.

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ಜಾಗವಿಲ್ಲದೆ ಆಸ್ಪತ್ರೆಯ ಆವರಣದಲ್ಲೇ ರಾತ್ರಿ ವೇಳೆ ಚಳಿಯಲ್ಲಿ ಮಲಗುವುದು ಅನಿವಾರ್ಯವಾಗಿದೆ. ರಾತ್ರಿ ಇಲಿ, ಹೆಗ್ಗಣಗಳ ಕಾಟ ಒಂದೆಡೆಯಾದರೆ ದುಷ್ಕರ್ಮಿಗಳು ಚಾಕು ತೋರಿಸಿ ಹಣ ಮೊಬೈಲ್ ದೋಚುತ್ತಿರುವುದು ಮತ್ತೊಂದೆಡೆಯಾಗಿದೆ.

ಆಸ್ಪತ್ರೆಯ ಆವರಣದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ದುಷ್ಕರ್ಮಿಗಳಿಗೆ ಅನುಕೂಲವಾಗಿದೆ. ಆಸ್ಪತ್ರೆಗೆ ಬರುವವರು ಬಹುತೇಕ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮವರ್ಗದವರೇ ಆಗಿರುವುದರಿಂದ ಅವರ ಬಳಿ ಇದ್ದ ಹಣ, ಮೊಬೈಲ್ ದೋಚಿದರೆ ಯಾರು ಹೊಣೆ ?

ಇನ್ನು ಮುಂದಾದರೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಆಸ್ಪತ್ರೆಯ ಆವರಣದಲ್ಲಿ ರಾತ್ರಿ ವೇಳೆ ಪೊಲೀಸರನ್ನು ನಿಯೋಜಿಸಬೇಕು. ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

9 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

29 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago