ಓದುಗರ ಪತ್ರ
ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ ವೈದ್ಯರಿದ್ದಲ್ಲಿಗೆ ತೆಗೆದು ಕೊಂಡು ಹೋಗಿ ತಪಾಸಣೆಗೊಳಪಡಿಸುವ ಸ್ಥಿತಿ ನಿರ್ಮಾಣ ವಾಗಿದೆ. ಹೆರಿಗೆಯಾದವರನ್ನೂ ವಿವಿಧ ಪರೀಕ್ಷೆಗಾಗಿ ವಿವಿಧ ಕೊಠಡಿಗಳಿಗೆ ಅಲೆದಾಡಿಸುತ್ತಾರೆ. ಇದರಿಂದ ಸಿಸೇರಿಯನ್ ಹೆರಿಗೆಯಾದವರಿಗಂತೂ ತುಂಬಾ ತೊಂದರೆಯಾಗುತ್ತಿದೆ. ನಿಯಮಾನುಸಾರ ವೈದ್ಯರು ರೋಗಿಗಳಿದ್ದಲ್ಲಿಗೇ ಬಂದು ತಪಾಸಣೆ ಮಾಡಬೇಕು ಎಂಬ ಅರಿವೂ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ.
ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ಜಾಗವಿಲ್ಲದೆ ಆಸ್ಪತ್ರೆಯ ಆವರಣದಲ್ಲೇ ರಾತ್ರಿ ವೇಳೆ ಚಳಿಯಲ್ಲಿ ಮಲಗುವುದು ಅನಿವಾರ್ಯವಾಗಿದೆ. ರಾತ್ರಿ ಇಲಿ, ಹೆಗ್ಗಣಗಳ ಕಾಟ ಒಂದೆಡೆಯಾದರೆ ದುಷ್ಕರ್ಮಿಗಳು ಚಾಕು ತೋರಿಸಿ ಹಣ ಮೊಬೈಲ್ ದೋಚುತ್ತಿರುವುದು ಮತ್ತೊಂದೆಡೆಯಾಗಿದೆ.
ಆಸ್ಪತ್ರೆಯ ಆವರಣದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ದುಷ್ಕರ್ಮಿಗಳಿಗೆ ಅನುಕೂಲವಾಗಿದೆ. ಆಸ್ಪತ್ರೆಗೆ ಬರುವವರು ಬಹುತೇಕ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮವರ್ಗದವರೇ ಆಗಿರುವುದರಿಂದ ಅವರ ಬಳಿ ಇದ್ದ ಹಣ, ಮೊಬೈಲ್ ದೋಚಿದರೆ ಯಾರು ಹೊಣೆ ?
ಇನ್ನು ಮುಂದಾದರೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಆಸ್ಪತ್ರೆಯ ಆವರಣದಲ್ಲಿ ರಾತ್ರಿ ವೇಳೆ ಪೊಲೀಸರನ್ನು ನಿಯೋಜಿಸಬೇಕು. ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…