Andolana originals

ಓದುಗರ ಪತ್ರ: ಚೆಲುವಾಂಬ ಆಸ್ಪತ್ರೆ ಅವ್ಯವಸ್ಥ ಸರಿಪಡಿಸಿ

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ ವಾರ್ಡಿಗೆ ಬಂದು ತಪಾಸಣೆ ಮಾಡುವುದಿಲ್ಲ, ಯಾವುದೋ ಒಂದು ಕೊಠಡಿಯಲ್ಲಿ ಕುಳಿತಿರುತ್ತಾರೆ. ನವಜಾತ ಶಿಶುಗಳನ್ನೂ ವೈದ್ಯರಿದ್ದಲ್ಲಿಗೆ ತೆಗೆದು ಕೊಂಡು ಹೋಗಿ ತಪಾಸಣೆಗೊಳಪಡಿಸುವ ಸ್ಥಿತಿ ನಿರ್ಮಾಣ ವಾಗಿದೆ. ಹೆರಿಗೆಯಾದವರನ್ನೂ ವಿವಿಧ ಪರೀಕ್ಷೆಗಾಗಿ ವಿವಿಧ ಕೊಠಡಿಗಳಿಗೆ ಅಲೆದಾಡಿಸುತ್ತಾರೆ. ಇದರಿಂದ ಸಿಸೇರಿಯನ್ ಹೆರಿಗೆಯಾದವರಿಗಂತೂ ತುಂಬಾ ತೊಂದರೆಯಾಗುತ್ತಿದೆ. ನಿಯಮಾನುಸಾರ ವೈದ್ಯರು ರೋಗಿಗಳಿದ್ದಲ್ಲಿಗೇ ಬಂದು ತಪಾಸಣೆ ಮಾಡಬೇಕು ಎಂಬ ಅರಿವೂ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ.

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ಜಾಗವಿಲ್ಲದೆ ಆಸ್ಪತ್ರೆಯ ಆವರಣದಲ್ಲೇ ರಾತ್ರಿ ವೇಳೆ ಚಳಿಯಲ್ಲಿ ಮಲಗುವುದು ಅನಿವಾರ್ಯವಾಗಿದೆ. ರಾತ್ರಿ ಇಲಿ, ಹೆಗ್ಗಣಗಳ ಕಾಟ ಒಂದೆಡೆಯಾದರೆ ದುಷ್ಕರ್ಮಿಗಳು ಚಾಕು ತೋರಿಸಿ ಹಣ ಮೊಬೈಲ್ ದೋಚುತ್ತಿರುವುದು ಮತ್ತೊಂದೆಡೆಯಾಗಿದೆ.

ಆಸ್ಪತ್ರೆಯ ಆವರಣದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ದುಷ್ಕರ್ಮಿಗಳಿಗೆ ಅನುಕೂಲವಾಗಿದೆ. ಆಸ್ಪತ್ರೆಗೆ ಬರುವವರು ಬಹುತೇಕ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮವರ್ಗದವರೇ ಆಗಿರುವುದರಿಂದ ಅವರ ಬಳಿ ಇದ್ದ ಹಣ, ಮೊಬೈಲ್ ದೋಚಿದರೆ ಯಾರು ಹೊಣೆ ?

ಇನ್ನು ಮುಂದಾದರೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಆಸ್ಪತ್ರೆಯ ಆವರಣದಲ್ಲಿ ರಾತ್ರಿ ವೇಳೆ ಪೊಲೀಸರನ್ನು ನಿಯೋಜಿಸಬೇಕು. ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

9 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

9 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

9 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

9 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

9 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

9 hours ago