ಓದುಗರ ಪತ್ರ
ಮೈಸೂರಿನ ವಿ.ವಿ.ಮೊಹಲ್ಲಾದ ೨ನೇ ಮುಖ್ಯರಸ್ತೆ (ನಿರ್ಮಲಾ ಕಾನ್ವೆಂಟ್ ರಸ್ತೆ)ಯು ಹಳ್ಳ ಕೊಳ್ಳಗಳಿಂದ ಕೂಡಿದ್ದು, ದ್ವಿಚಕ್ರ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಇದರಿಂದ ತುಂಬಾ ತೊಂದರೆಯಾಗಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಓಡಿಸುವುದೇ ಹರ ಸಾಹಸವಾಗಿದೆ. ಎಲ್ಲೆಂದರಲ್ಲಿ ಉಬ್ಬು ತಗ್ಗುಗಳು ನಿರ್ಮಾಣವಾಗಿವೆ. ಇದೇ ರಸ್ತೆಯಲ್ಲಿ ನಿರ್ಮಲಾ ಕಾನ್ವೆಂಟ್ ಇರುವುದರಿಂದ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ವಾಯುವಿಹಾರಕ್ಕೆ ಚೆಲುವಾಂಬ ಉದ್ಯಾನವನಕ್ಕೆ ತೆರಳುವವರಿಗೂ ಇದರಿಂದ ಸಾಕಷ್ಟು ಕಿರಿಕಿರಿ ಉಂಟಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…