ಓದುಗರ ಪತ್ರ
ಮೈಸೂರಿನ ಜೆ.ಎಲ್.ಬಿ. ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ವಾರದಲ್ಲಿ ಮೂರು-ನಾಲ್ಕು ದಿನಗಳು ಸಂಗೀತ ಕಾರ್ಯಕ್ರಮಗಳು ಮತ್ತು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಭಾಂಗಣವು ನಗರದ ಹೃದಯಭಾಗದಲ್ಲಿರುವುದರಿಂದ ಇಡೀ ಸಭಾಂಗಣವೇ ತುಂಬಿ ಹೋಗುತ್ತದೆ. ಹಿರಿಯ ನಾಗರಿಕರು ಹೆಚ್ಚಾಗಿ ಇಲ್ಲಿಗೆ ಬರುತ್ತಾರೆ.
ಆದರೆ, ಸಭಾಂಗಣದಲ್ಲಿ ಕುಳಿತು ಕೊಳ್ಳುವ ಆಸನಗಳೆಲ್ಲಾ ಮುರಿದ ಸ್ಥಿತಿಯಲ್ಲಿ ಇವೆ. ಇಲ್ಲಿರುವ ಆಸನಗಳು ಕುಳಿತುಕೊಳ್ಳಲು ಚಿಕ್ಕದಾಗಿರುವುದರಿಂದ ಇಲ್ಲಿ ನಡೆಯುವ ಕಾರ್ಯಕ್ರಮವನ್ನು ಪ್ರೇಕ್ಷಕರು ಕಷ್ಟ ಪಟ್ಟು ವೀಕ್ಷಿಸುವಂತಾಗಿದೆ. ಈ ಕಾರಣಕ್ಕಾಗಿಯೇ ಹಲವು ಹಿರಿಯ ನಾಗರಿಕರು ಕಾರ್ಯಕ್ರಮದ ಮಧ್ಯದಲ್ಲೇ ಎದ್ದು ಹೋಗುತ್ತಾರೆ. ಈ ಸಂಗೀತ ಸಭಾ ಭವನವನ್ನು ನಿರ್ಮಾಣ ಮಾಡಿ, ಹಲವು ವರ್ಷಗಳಾಗಿದ್ದು, ಸುಣ್ಣ – ಬಣ್ಣ ಕಂಡು ಬಹಳ ವರ್ಷಗಳೇ ಕಳೆದಿವೆ.
ಆಡಳಿತ ಮಂಡಳಿಯು, ಭವನವನ್ನು ನವೀಕರಣ ಮಾಡಿ ಪ್ರೇಕ್ಷಕರು ಕುಳಿತುಕೊಳ್ಳಲು ಒಳ್ಳೆಯ ಆಸನ ವ್ಯವಸ್ಥೆ ಮಾಡಿದರೆ ಹಿರಿಯ ನಾಗರಿಕರಿಗೂ ಅನುಕೂಲವಾಗುತ್ತದೆ. ಈ ಭಾಗದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಭವನವನ್ನು ನವೀಕರಣ ಮಾಡಲು ಆಸಕ್ತಿವಹಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…