Andolana originals

ಓದುಗರ ಪತ್ರ: ನಾದಬ್ರಹ್ಮ ಸಂಗೀತ ಸಭಾದಲ್ಲಿ ಆಸನ ವ್ಯವಸ್ಥೆ ಸರಿಪಡಿಸಿ

ಮೈಸೂರಿನ ಜೆ.ಎಲ್.ಬಿ. ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ವಾರದಲ್ಲಿ ಮೂರು-ನಾಲ್ಕು ದಿನಗಳು ಸಂಗೀತ ಕಾರ್ಯಕ್ರಮಗಳು ಮತ್ತು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಭಾಂಗಣವು ನಗರದ ಹೃದಯಭಾಗದಲ್ಲಿರುವುದರಿಂದ ಇಡೀ ಸಭಾಂಗಣವೇ ತುಂಬಿ ಹೋಗುತ್ತದೆ. ಹಿರಿಯ ನಾಗರಿಕರು ಹೆಚ್ಚಾಗಿ ಇಲ್ಲಿಗೆ ಬರುತ್ತಾರೆ.

ಆದರೆ, ಸಭಾಂಗಣದಲ್ಲಿ ಕುಳಿತು ಕೊಳ್ಳುವ ಆಸನಗಳೆಲ್ಲಾ ಮುರಿದ ಸ್ಥಿತಿಯಲ್ಲಿ ಇವೆ. ಇಲ್ಲಿರುವ ಆಸನಗಳು ಕುಳಿತುಕೊಳ್ಳಲು ಚಿಕ್ಕದಾಗಿರುವುದರಿಂದ ಇಲ್ಲಿ ನಡೆಯುವ ಕಾರ್ಯಕ್ರಮವನ್ನು ಪ್ರೇಕ್ಷಕರು ಕಷ್ಟ ಪಟ್ಟು ವೀಕ್ಷಿಸುವಂತಾಗಿದೆ. ಈ ಕಾರಣಕ್ಕಾಗಿಯೇ ಹಲವು ಹಿರಿಯ ನಾಗರಿಕರು ಕಾರ್ಯಕ್ರಮದ ಮಧ್ಯದಲ್ಲೇ ಎದ್ದು ಹೋಗುತ್ತಾರೆ. ಈ ಸಂಗೀತ ಸಭಾ ಭವನವನ್ನು ನಿರ್ಮಾಣ ಮಾಡಿ, ಹಲವು ವರ್ಷಗಳಾಗಿದ್ದು, ಸುಣ್ಣ – ಬಣ್ಣ ಕಂಡು ಬಹಳ ವರ್ಷಗಳೇ ಕಳೆದಿವೆ.

ಆಡಳಿತ ಮಂಡಳಿಯು, ಭವನವನ್ನು ನವೀಕರಣ ಮಾಡಿ ಪ್ರೇಕ್ಷಕರು ಕುಳಿತುಕೊಳ್ಳಲು ಒಳ್ಳೆಯ ಆಸನ ವ್ಯವಸ್ಥೆ ಮಾಡಿದರೆ ಹಿರಿಯ ನಾಗರಿಕರಿಗೂ ಅನುಕೂಲವಾಗುತ್ತದೆ. ಈ ಭಾಗದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಭವನವನ್ನು ನವೀಕರಣ ಮಾಡಲು ಆಸಕ್ತಿವಹಿಸಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago