ಓದುಗರ ಪತ್ರ
ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ.
ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- ವಾಹನಗಳು ಹೊರಡುವಂತೆ ಸಂಚಾರ ನಿಯಮ ಸೂಚಿಸುತ್ತದೆ. ಆರ್ಟಿಓ ಕಚೇರಿಗಳಲ್ಲಿ ವಾಹನ ಚಾಲನಾ ಪರವಾನಗಿ ಪಡೆಯುವ ಮುನ್ನ ನಡೆಸುವ ಪರೀಕ್ಷೆ ಸಮಯದಲ್ಲಿ ಈ ಬಗ್ಗೆ ತಿಳಿಸುತ್ತಾರೆ. ಆದರೆ ಮೈಸೂರು ನಗರದ ಅನೇಕ ವೃತ್ತದ ಸಿಗ್ನಲ್ ದೀಪಗಳಲ್ಲಿ ಕೆಂಪು ಮತ್ತು ಹಸಿರು ಬಣ್ಣದ ಸಿಗ್ನಲ್ ದೀಪಗಳು ಮಾತ್ರ ಬಳಕೆಯಾಗುತ್ತಿದ್ದು, ಹಳದಿ ಬಣ್ಣದ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೈಸೂರು ನಗರದ ಸಂಚಾರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಎಲ್ಲಾ ವೃತ್ತಗಳಲ್ಲಿರುವ ಸಿಗ್ನಲ್ಗಳಲ್ಲಿ ಹಾಳಾಗಿರುವ ಹಳದಿ ಬಣ್ಣದ ಸಿಗ್ನಲ್ ದೀಪಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…