Andolana originals

ಓದುಗರ ಪತ್ರ: ಸಿಗ್ನಲ್ ದೀಪಗಳನ್ನು ಸರಿಪಡಿಸಿ

ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ.

ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- ವಾಹನಗಳು ಹೊರಡುವಂತೆ ಸಂಚಾರ ನಿಯಮ ಸೂಚಿಸುತ್ತದೆ. ಆರ್‌ಟಿಓ ಕಚೇರಿಗಳಲ್ಲಿ ವಾಹನ ಚಾಲನಾ ಪರವಾನಗಿ ಪಡೆಯುವ ಮುನ್ನ ನಡೆಸುವ ಪರೀಕ್ಷೆ ಸಮಯದಲ್ಲಿ ಈ ಬಗ್ಗೆ ತಿಳಿಸುತ್ತಾರೆ. ಆದರೆ ಮೈಸೂರು ನಗರದ ಅನೇಕ ವೃತ್ತದ ಸಿಗ್ನಲ್ ದೀಪಗಳಲ್ಲಿ ಕೆಂಪು ಮತ್ತು ಹಸಿರು ಬಣ್ಣದ ಸಿಗ್ನಲ್ ದೀಪಗಳು ಮಾತ್ರ ಬಳಕೆಯಾಗುತ್ತಿದ್ದು, ಹಳದಿ ಬಣ್ಣದ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೈಸೂರು ನಗರದ ಸಂಚಾರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಎಲ್ಲಾ ವೃತ್ತಗಳಲ್ಲಿರುವ ಸಿಗ್ನಲ್‌ಗಳಲ್ಲಿ ಹಾಳಾಗಿರುವ ಹಳದಿ ಬಣ್ಣದ ಸಿಗ್ನಲ್ ದೀಪಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

10 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

14 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago