ಓದುಗರ ಪತ್ರ
ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ.
ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- ವಾಹನಗಳು ಹೊರಡುವಂತೆ ಸಂಚಾರ ನಿಯಮ ಸೂಚಿಸುತ್ತದೆ. ಆರ್ಟಿಓ ಕಚೇರಿಗಳಲ್ಲಿ ವಾಹನ ಚಾಲನಾ ಪರವಾನಗಿ ಪಡೆಯುವ ಮುನ್ನ ನಡೆಸುವ ಪರೀಕ್ಷೆ ಸಮಯದಲ್ಲಿ ಈ ಬಗ್ಗೆ ತಿಳಿಸುತ್ತಾರೆ. ಆದರೆ ಮೈಸೂರು ನಗರದ ಅನೇಕ ವೃತ್ತದ ಸಿಗ್ನಲ್ ದೀಪಗಳಲ್ಲಿ ಕೆಂಪು ಮತ್ತು ಹಸಿರು ಬಣ್ಣದ ಸಿಗ್ನಲ್ ದೀಪಗಳು ಮಾತ್ರ ಬಳಕೆಯಾಗುತ್ತಿದ್ದು, ಹಳದಿ ಬಣ್ಣದ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೈಸೂರು ನಗರದ ಸಂಚಾರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಎಲ್ಲಾ ವೃತ್ತಗಳಲ್ಲಿರುವ ಸಿಗ್ನಲ್ಗಳಲ್ಲಿ ಹಾಳಾಗಿರುವ ಹಳದಿ ಬಣ್ಣದ ಸಿಗ್ನಲ್ ದೀಪಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…