Andolana originals

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ನೀರಿನ ಪೈಪ್ ಸರಿಪಡಿಸಿ

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ತಂಗುದಾಣದ ನೆಲಹಾಸು ಟೈಲ್ಸ್‌ಗಳನ್ನು ಅಳವಡಿಸಿರುವುದರಿಂದ ಪ್ರಯಾಣಿಕರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡರೆ ಯಾರು ಹೊಣೆ. ಇದು ಪ್ರಮುಖ ರಸ್ತೆಯಾಗಿದ್ದು, ಜನಪ್ರತಿನಿಧಿಗಳು , ಪಾಲಿಕೆ ಅಧಿಕಾರಿಗಳು ನಿತ್ಯ ಸಂಚರಿಸುತ್ತಾರೆ. ಆದರೆ ನೀರಿನ ಪೈಪ್ ಒಡೆದು ಹೋಗಿರುವುದು ಅವರ ಗಮನಕ್ಕೆ ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಸಂಬಂಧಪಟ್ಟವರು ಕೂಡಲೇ ಬಸ್ ತಂಗುದಾಣದಲ್ಲಿ ಒಡೆದು ಹೋಗಿರುವ ಪೈಪ್‌ಅನ್ನು ದುರಸ್ತಿ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

-ಭಾರ್ಗವ, ಮೈಸೂರು

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

27 mins ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

45 mins ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

1 hour ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

2 hours ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

2 hours ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

2 hours ago