Andolana originals

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ನೀರಿನ ಪೈಪ್ ಸರಿಪಡಿಸಿ

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ತಂಗುದಾಣದ ನೆಲಹಾಸು ಟೈಲ್ಸ್‌ಗಳನ್ನು ಅಳವಡಿಸಿರುವುದರಿಂದ ಪ್ರಯಾಣಿಕರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡರೆ ಯಾರು ಹೊಣೆ. ಇದು ಪ್ರಮುಖ ರಸ್ತೆಯಾಗಿದ್ದು, ಜನಪ್ರತಿನಿಧಿಗಳು , ಪಾಲಿಕೆ ಅಧಿಕಾರಿಗಳು ನಿತ್ಯ ಸಂಚರಿಸುತ್ತಾರೆ. ಆದರೆ ನೀರಿನ ಪೈಪ್ ಒಡೆದು ಹೋಗಿರುವುದು ಅವರ ಗಮನಕ್ಕೆ ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಸಂಬಂಧಪಟ್ಟವರು ಕೂಡಲೇ ಬಸ್ ತಂಗುದಾಣದಲ್ಲಿ ಒಡೆದು ಹೋಗಿರುವ ಪೈಪ್‌ಅನ್ನು ದುರಸ್ತಿ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

-ಭಾರ್ಗವ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago