ಓದುಗರ ಪತ್ರ
ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ತಂಗುದಾಣದ ನೆಲಹಾಸು ಟೈಲ್ಸ್ಗಳನ್ನು ಅಳವಡಿಸಿರುವುದರಿಂದ ಪ್ರಯಾಣಿಕರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡರೆ ಯಾರು ಹೊಣೆ. ಇದು ಪ್ರಮುಖ ರಸ್ತೆಯಾಗಿದ್ದು, ಜನಪ್ರತಿನಿಧಿಗಳು , ಪಾಲಿಕೆ ಅಧಿಕಾರಿಗಳು ನಿತ್ಯ ಸಂಚರಿಸುತ್ತಾರೆ. ಆದರೆ ನೀರಿನ ಪೈಪ್ ಒಡೆದು ಹೋಗಿರುವುದು ಅವರ ಗಮನಕ್ಕೆ ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಸಂಬಂಧಪಟ್ಟವರು ಕೂಡಲೇ ಬಸ್ ತಂಗುದಾಣದಲ್ಲಿ ಒಡೆದು ಹೋಗಿರುವ ಪೈಪ್ಅನ್ನು ದುರಸ್ತಿ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ಭಾರ್ಗವ, ಮೈಸೂರು
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…