Mysore
26
scattered clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಅಭಿವೃದ್ಧಿ ಕೆಲಸಗಳ ಕಡೆಗೂ ಗಮನಹರಿಸಿ

ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು.

ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಕೇವಲ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಖರ್ಚು ಮಾಡುತ್ತಾ ಇತರೆ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸುತ್ತಿದೆ. ಸರ್ಕಾರದ ಈ ನಡೆ ಶಾಸಕರಿಗೂ ಬೇಸರ ತಂದಿದೆ. ಈ ಗ್ಯಾರಂಟಿ ಯೋಜನೆಗಳನ್ನು ಅವಶ್ಯಕತೆ ಇಲ್ಲದವರೂ ಪಡೆದುಕೊಳ್ಳುತ್ತಿರುವ ಪರಿಣಾಮ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗಿದೆ. ಉಳ್ಳವರೂ ಇದರ ಫಲಾನುಭವಿಗಳಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವೇ ಬದಲಾಗಿದೆ. ಆದ್ದರಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರಿಗೆ ಮಾತ್ರ ನೀಡಿ, ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಸ್ಥಗಿತಗೊಳಿಸಬೇಕು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಆ ಹಣವನ್ನು ರಾಜ್ಯದ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.

Tags:
error: Content is protected !!