ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು.
ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಕೇವಲ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಖರ್ಚು ಮಾಡುತ್ತಾ ಇತರೆ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸುತ್ತಿದೆ. ಸರ್ಕಾರದ ಈ ನಡೆ ಶಾಸಕರಿಗೂ ಬೇಸರ ತಂದಿದೆ. ಈ ಗ್ಯಾರಂಟಿ ಯೋಜನೆಗಳನ್ನು ಅವಶ್ಯಕತೆ ಇಲ್ಲದವರೂ ಪಡೆದುಕೊಳ್ಳುತ್ತಿರುವ ಪರಿಣಾಮ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗಿದೆ. ಉಳ್ಳವರೂ ಇದರ ಫಲಾನುಭವಿಗಳಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವೇ ಬದಲಾಗಿದೆ. ಆದ್ದರಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರಿಗೆ ಮಾತ್ರ ನೀಡಿ, ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಸ್ಥಗಿತಗೊಳಿಸಬೇಕು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಆ ಹಣವನ್ನು ರಾಜ್ಯದ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…