ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು.
ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಕೇವಲ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಖರ್ಚು ಮಾಡುತ್ತಾ ಇತರೆ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸುತ್ತಿದೆ. ಸರ್ಕಾರದ ಈ ನಡೆ ಶಾಸಕರಿಗೂ ಬೇಸರ ತಂದಿದೆ. ಈ ಗ್ಯಾರಂಟಿ ಯೋಜನೆಗಳನ್ನು ಅವಶ್ಯಕತೆ ಇಲ್ಲದವರೂ ಪಡೆದುಕೊಳ್ಳುತ್ತಿರುವ ಪರಿಣಾಮ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗಿದೆ. ಉಳ್ಳವರೂ ಇದರ ಫಲಾನುಭವಿಗಳಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವೇ ಬದಲಾಗಿದೆ. ಆದ್ದರಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರಿಗೆ ಮಾತ್ರ ನೀಡಿ, ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಸ್ಥಗಿತಗೊಳಿಸಬೇಕು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಆ ಹಣವನ್ನು ರಾಜ್ಯದ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…