ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ ಅವರು ಪುನಃ ಅದೇ ಸ್ಥಳದಲ್ಲಿ ವ್ಯಾಪಾರ, ವ್ಯವಹಾರ ನಡೆಸುತ್ತಿರುವುದು ಕಂಡು ಬಂದಿದೆ. ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕರ್ಜನ್ ಪಾರ್ಕ್ ಪಕ್ಕದ ಪಾದಚಾರಿ ರಸ್ತೆಯಲ್ಲಿ ಎಂದಿನಂತೆ ಫುಟ್ಪಾತ್ ವ್ಯಾಪಾರಸ್ಥರು ತಮ್ಮ ಕಸುಬನ್ನು ಪ್ರಾರಂಭಿಸಿದ್ದಾರೆ. ಅಲ್ಲಿ ಬಟ್ಟೆ, ವಾಚ್, ಗೋಲ್ಗುಪ್ಪ, ಹಣ್ಣು, ಚಪ್ಪಲಿಗಳ ವ್ಯಾಪಾರವನ್ನು ನಡೆಸುತ್ತಿದ್ದಾರೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ತೊಂದರೆಯಾಗುತ್ತಿದೆ. ಇದಲ್ಲದೇ ಸಯ್ಯಾಜಿರಾವ್ ರಸ್ತೆಯ ಎರಡೂ ಬದಿಗಳಲ್ಲಿ ಫುಟ್ಪಾತ್ ವ್ಯಾಪಾರ ಮುಂದುವರಿದಿದೆ. ಮೈಸೂರು ನಗರಪಾಲಿಕೆ ಆಯುಕ್ತರು ಈ ಸ್ಥಳಗಳನ್ನು ಪರಿಶೀಲಿಸಿ ಫುಟ್ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…