ಓದುಗರ ಪತ್ರ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ೨೦೨೫ರ ಫೈನಲ್ ಪಂದ್ಯದ ರಣರೋಚಕ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ೬ ರನ್ಗಳಿಂದ ಆರ್ಸಿಬಿ ತಂಡ ವಿಜಯ ಪತಾಕೆ ಹಾರಿಸಿದೆ. ೧೮ ವರ್ಷಗಳು ಶಬರಿಯಂತೆ ಕಾದು ಕನಸನ್ನು ನನಸು ಮಾಡಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿರಾಟ್ ಕೊಹ್ಲಿ ಅವರ ತಾಳ್ಮೆಯ ಆಟ ಹಾಗೂ ಜಿತೇಶ್ ಶರ್ಮಾ ಅವರ ಅದ್ಭುತ ಬ್ಯಾಟಿಂಗ್ ತಂಡಕ್ಕೆ ನೆರವಾಯಿತು. ಹಾಗೆಯೇ ಬೌಲಿಂಗ್ ವಿಭಾಗದಲ್ಲೂ ಆರ್ಸಿಬಿ ತಂಡವು ಮಿಂಚಿನ ದಾಳಿಯನ್ನು ನಡೆಸಿ ಎದುರಾಳಿಗಳನ್ನು ಕಟ್ಟಿ ಹಾಕಿತು. ದಿಗ್ಗಜ ಆಟಗಾರ ಕೊಹ್ಲಿ ೧೮ ವರ್ಷಗಳಿಂದ ತಂಡವನ್ನು ಬದಲಿಸದೇ ಕಪ್ಗೋಸ್ಕರ ಹೋರಾಟ ಮಾಡಿದ್ದಾರೆ. ಪ್ರತಿ ಮ್ಯಾಚ್ ಗೆದ್ದಾಗಲೂ ಕ್ರೀಡಾಂಗಣದ ತುಂಬಾ ಓಡಾಡಿ ಸಂಭ್ರಮಿಸುತ್ತಿದ್ದ ಕೊಹ್ಲಿ ಫೈನಲ್ ಮ್ಯಾಚ್ನಲ್ಲಿ ವಿಜಯಲಕ್ಷ್ಮಿ ಒಲಿದಾಗ ಪುಟ್ಟ ಮಗುವಿನಂತೆ ಆನಂದ ಬಾಷ್ಪವನ್ನು ಸುರಿಸುತ್ತಾ ಬಿಕ್ಕಿಬಿಕ್ಕಿ ಅಳತೊಡಗಿದರು. ಭೂಮಿತಾಯಿಯತ್ತ ಕೆಲವು ಕ್ಷಣ ಮುತ್ತಿಕ್ಕಿದರು. ಆಗ ಇಡೀ ಕ್ರೀಡಾಂಗಣವೇ ಮೌನ ಹೊಕ್ಕಿತ್ತು. ಒಟ್ಟಿನಲ್ಲಿ ಕಪ್ ನಮ್ದೇ ಎನ್ನುವುದಕ್ಕೆ ಅರ್ಥ ಸಿಕ್ಕಂತಾಯಿತು. ಕನ್ನಡಿಗರ ಕನಸನ್ನು ನನಸು ಮಾಡಿದ ಆರ್ಸಿಬಿ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು.
-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…