Andolana originals

ಓದುಗರ ಪತ್ರ: ಐಪಿಎಲ್ ಫೈನಲ್ ಸಂಭ್ರಮದ ಕ್ಷಣವನ್ನು ಮರೆಯುವುದುಂಟೇ…

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ೨೦೨೫ರ ಫೈನಲ್ ಪಂದ್ಯದ ರಣರೋಚಕ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ೬ ರನ್‌ಗಳಿಂದ ಆರ್‌ಸಿಬಿ ತಂಡ ವಿಜಯ ಪತಾಕೆ ಹಾರಿಸಿದೆ. ೧೮ ವರ್ಷಗಳು ಶಬರಿಯಂತೆ ಕಾದು ಕನಸನ್ನು ನನಸು ಮಾಡಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿರಾಟ್ ಕೊಹ್ಲಿ ಅವರ ತಾಳ್ಮೆಯ ಆಟ ಹಾಗೂ ಜಿತೇಶ್ ಶರ್ಮಾ ಅವರ ಅದ್ಭುತ ಬ್ಯಾಟಿಂಗ್ ತಂಡಕ್ಕೆ ನೆರವಾಯಿತು. ಹಾಗೆಯೇ ಬೌಲಿಂಗ್ ವಿಭಾಗದಲ್ಲೂ ಆರ್‌ಸಿಬಿ ತಂಡವು ಮಿಂಚಿನ ದಾಳಿಯನ್ನು ನಡೆಸಿ ಎದುರಾಳಿಗಳನ್ನು ಕಟ್ಟಿ ಹಾಕಿತು. ದಿಗ್ಗಜ ಆಟಗಾರ ಕೊಹ್ಲಿ ೧೮ ವರ್ಷಗಳಿಂದ ತಂಡವನ್ನು ಬದಲಿಸದೇ ಕಪ್‌ಗೋಸ್ಕರ ಹೋರಾಟ ಮಾಡಿದ್ದಾರೆ. ಪ್ರತಿ ಮ್ಯಾಚ್ ಗೆದ್ದಾಗಲೂ ಕ್ರೀಡಾಂಗಣದ ತುಂಬಾ ಓಡಾಡಿ ಸಂಭ್ರಮಿಸುತ್ತಿದ್ದ ಕೊಹ್ಲಿ ಫೈನಲ್ ಮ್ಯಾಚ್‌ನಲ್ಲಿ ವಿಜಯಲಕ್ಷ್ಮಿ ಒಲಿದಾಗ ಪುಟ್ಟ ಮಗುವಿನಂತೆ ಆನಂದ ಬಾಷ್ಪವನ್ನು ಸುರಿಸುತ್ತಾ ಬಿಕ್ಕಿಬಿಕ್ಕಿ ಅಳತೊಡಗಿದರು. ಭೂಮಿತಾಯಿಯತ್ತ ಕೆಲವು ಕ್ಷಣ ಮುತ್ತಿಕ್ಕಿದರು. ಆಗ ಇಡೀ ಕ್ರೀಡಾಂಗಣವೇ ಮೌನ ಹೊಕ್ಕಿತ್ತು. ಒಟ್ಟಿನಲ್ಲಿ ಕಪ್ ನಮ್ದೇ ಎನ್ನುವುದಕ್ಕೆ ಅರ್ಥ ಸಿಕ್ಕಂತಾಯಿತು. ಕನ್ನಡಿಗರ ಕನಸನ್ನು ನನಸು ಮಾಡಿದ ಆರ್‌ಸಿಬಿ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು.

-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ

 

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago