ಓದುಗರ ಪತ್ರ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ೨೦೨೫ರ ಫೈನಲ್ ಪಂದ್ಯದ ರಣರೋಚಕ ಹಣಾಹಣಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ೬ ರನ್ಗಳಿಂದ ಆರ್ಸಿಬಿ ತಂಡ ವಿಜಯ ಪತಾಕೆ ಹಾರಿಸಿದೆ. ೧೮ ವರ್ಷಗಳು ಶಬರಿಯಂತೆ ಕಾದು ಕನಸನ್ನು ನನಸು ಮಾಡಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿರಾಟ್ ಕೊಹ್ಲಿ ಅವರ ತಾಳ್ಮೆಯ ಆಟ ಹಾಗೂ ಜಿತೇಶ್ ಶರ್ಮಾ ಅವರ ಅದ್ಭುತ ಬ್ಯಾಟಿಂಗ್ ತಂಡಕ್ಕೆ ನೆರವಾಯಿತು. ಹಾಗೆಯೇ ಬೌಲಿಂಗ್ ವಿಭಾಗದಲ್ಲೂ ಆರ್ಸಿಬಿ ತಂಡವು ಮಿಂಚಿನ ದಾಳಿಯನ್ನು ನಡೆಸಿ ಎದುರಾಳಿಗಳನ್ನು ಕಟ್ಟಿ ಹಾಕಿತು. ದಿಗ್ಗಜ ಆಟಗಾರ ಕೊಹ್ಲಿ ೧೮ ವರ್ಷಗಳಿಂದ ತಂಡವನ್ನು ಬದಲಿಸದೇ ಕಪ್ಗೋಸ್ಕರ ಹೋರಾಟ ಮಾಡಿದ್ದಾರೆ. ಪ್ರತಿ ಮ್ಯಾಚ್ ಗೆದ್ದಾಗಲೂ ಕ್ರೀಡಾಂಗಣದ ತುಂಬಾ ಓಡಾಡಿ ಸಂಭ್ರಮಿಸುತ್ತಿದ್ದ ಕೊಹ್ಲಿ ಫೈನಲ್ ಮ್ಯಾಚ್ನಲ್ಲಿ ವಿಜಯಲಕ್ಷ್ಮಿ ಒಲಿದಾಗ ಪುಟ್ಟ ಮಗುವಿನಂತೆ ಆನಂದ ಬಾಷ್ಪವನ್ನು ಸುರಿಸುತ್ತಾ ಬಿಕ್ಕಿಬಿಕ್ಕಿ ಅಳತೊಡಗಿದರು. ಭೂಮಿತಾಯಿಯತ್ತ ಕೆಲವು ಕ್ಷಣ ಮುತ್ತಿಕ್ಕಿದರು. ಆಗ ಇಡೀ ಕ್ರೀಡಾಂಗಣವೇ ಮೌನ ಹೊಕ್ಕಿತ್ತು. ಒಟ್ಟಿನಲ್ಲಿ ಕಪ್ ನಮ್ದೇ ಎನ್ನುವುದಕ್ಕೆ ಅರ್ಥ ಸಿಕ್ಕಂತಾಯಿತು. ಕನ್ನಡಿಗರ ಕನಸನ್ನು ನನಸು ಮಾಡಿದ ಆರ್ಸಿಬಿ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು.
-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…