ಓದುಗರ ಪತ್ರ
ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ ನೀಡುವ ನೆಪದಲ್ಲಿ ದೊಡ್ಡ ಮೊತ್ತದ ನೋಂದಣಿ ಶುಲ್ಕ, ತರಬೇತಿ ಶುಲ್ಕ ಹಾಗೂ ಇತರೆ ಅನವಶ್ಯಕ ಶುಲ್ಕಗಳನ್ನು ಕೇಳಲಾಗುತ್ತದೆ. ಹಣ ಪಡೆದ ನಂತರ ಮೊಬೈಲ್ ಸಂಪರ್ಕ ಕಡಿತಗೊಳಿಸುವುದು ಅಥವಾ ಸುಳ್ಳು ಭರವಸೆ ನೀಡುತ್ತಾ ಕಾಲಹರಣ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಅನೇಕ ಮಧ್ಯಮ ವರ್ಗದ ಮತ್ತು ನಿರುದ್ಯೋಗಿ ಯುವಕರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಫ್ರಾಂಚೈಸಿ ವಂಚನೆಗಳ ಮಾದರಿಯು ಬಹುತೇಕ ಪಿರಮಿಡ್ ಯೋಜನೆ ಅಥವಾ ಮಲ್ಟಿ ಲೆವೆಲ್ ಮಾರ್ಕೆಟಿಂಗ್ ಹೋಲುತ್ತಿವೆ.
ನಿಜವಾದ ಉತ್ಪನ್ನ ಅಥವಾ ಸೇವೆಯ ಬದಲು, ಹೊಸ ಸದಸ್ಯರನ್ನು ಸೇರಿಸುವ ಮೂಲಕ ಹಣಗಳಿಸುವುದೇ ಇವರ ಮುಖ್ಯ ಉದ್ದೇಶವಾಗಿರುತ್ತದೆ. ದಿನನಿತ್ಯ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವುದು ಕಳವಳಕಾರಿ ವಿಷಯವಾಗಿದೆ. ನಕಲಿ ವೆಬ್ ಸೈಟ್ಗಳು, ಸುಳ್ಳು ಒಪ್ಪಂದ ಪತ್ರಗಳು ಮತ್ತು ಆಕರ್ಷಕ ಜಾಹೀರಾತುಗಳ ಮೂಲಕ ಜನರನ್ನು ವಂಚಿಸಲಾಗುತ್ತಿದೆ. ಈ ರೀತಿಯ ವಂಚನೆಗಳನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಫ್ರಾಂಚೈಸಿ ನೀಡುವ ಎಲ್ಲಾ ಕಂಪೆನಿಗಳ ಕಡ್ಡಾಯ ನೋಂದಣಿಯನ್ನು ಸರ್ಕಾರದ ಅಧಿಕೃತ ಪೋರ್ಟಲ್ನಲ್ಲಿ ನಡೆಸಿ ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಪರಿಶೀಲಿಸಬಹುದಾದ ವ್ಯವಸ್ಥೆ ಕಲ್ಪಿಸಬೇಕು. ಸೈಬರ್ ಕ್ರೈ ಠಾಣೆಯವರು ಇಂತಹ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ಮಾಡುವ ಸಂಬಂಧ ವಿಶೇಷ ತಂಡಗಳನ್ನು ರಚಿಸುವುದು ಅಗತ್ಯ.ಜೊತೆಗೆ, ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಹಾಸನ: ಸೈಕಲ್ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…
ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…
ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…
ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…
ಮೈಸೂರು: ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…