Andolana originals

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ ನೀಡುವ ನೆಪದಲ್ಲಿ ದೊಡ್ಡ ಮೊತ್ತದ ನೋಂದಣಿ ಶುಲ್ಕ, ತರಬೇತಿ ಶುಲ್ಕ ಹಾಗೂ ಇತರೆ ಅನವಶ್ಯಕ ಶುಲ್ಕಗಳನ್ನು ಕೇಳಲಾಗುತ್ತದೆ. ಹಣ ಪಡೆದ ನಂತರ ಮೊಬೈಲ್ ಸಂಪರ್ಕ ಕಡಿತಗೊಳಿಸುವುದು ಅಥವಾ ಸುಳ್ಳು ಭರವಸೆ ನೀಡುತ್ತಾ ಕಾಲಹರಣ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಅನೇಕ ಮಧ್ಯಮ ವರ್ಗದ ಮತ್ತು ನಿರುದ್ಯೋಗಿ ಯುವಕರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಫ್ರಾಂಚೈಸಿ ವಂಚನೆಗಳ ಮಾದರಿಯು ಬಹುತೇಕ ಪಿರಮಿಡ್ ಯೋಜನೆ ಅಥವಾ ಮಲ್ಟಿ ಲೆವೆಲ್ ಮಾರ್ಕೆಟಿಂಗ್ ಹೋಲುತ್ತಿವೆ.

ನಿಜವಾದ ಉತ್ಪನ್ನ ಅಥವಾ ಸೇವೆಯ ಬದಲು, ಹೊಸ ಸದಸ್ಯರನ್ನು ಸೇರಿಸುವ ಮೂಲಕ ಹಣಗಳಿಸುವುದೇ ಇವರ ಮುಖ್ಯ ಉದ್ದೇಶವಾಗಿರುತ್ತದೆ. ದಿನನಿತ್ಯ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವುದು ಕಳವಳಕಾರಿ ವಿಷಯವಾಗಿದೆ. ನಕಲಿ ವೆಬ್ ಸೈಟ್‌ಗಳು, ಸುಳ್ಳು ಒಪ್ಪಂದ ಪತ್ರಗಳು ಮತ್ತು ಆಕರ್ಷಕ ಜಾಹೀರಾತುಗಳ ಮೂಲಕ ಜನರನ್ನು ವಂಚಿಸಲಾಗುತ್ತಿದೆ. ಈ ರೀತಿಯ ವಂಚನೆಗಳನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಫ್ರಾಂಚೈಸಿ ನೀಡುವ ಎಲ್ಲಾ ಕಂಪೆನಿಗಳ ಕಡ್ಡಾಯ ನೋಂದಣಿಯನ್ನು ಸರ್ಕಾರದ ಅಧಿಕೃತ ಪೋರ್ಟಲ್‌ನಲ್ಲಿ ನಡೆಸಿ ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಪರಿಶೀಲಿಸಬಹುದಾದ ವ್ಯವಸ್ಥೆ ಕಲ್ಪಿಸಬೇಕು. ಸೈಬರ್ ಕ್ರೈ ಠಾಣೆಯವರು ಇಂತಹ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ಮಾಡುವ ಸಂಬಂಧ ವಿಶೇಷ ತಂಡಗಳನ್ನು ರಚಿಸುವುದು ಅಗತ್ಯ.ಜೊತೆಗೆ, ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

4 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

5 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

13 hours ago