Andolana originals

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ ನೀಡುವ ನೆಪದಲ್ಲಿ ದೊಡ್ಡ ಮೊತ್ತದ ನೋಂದಣಿ ಶುಲ್ಕ, ತರಬೇತಿ ಶುಲ್ಕ ಹಾಗೂ ಇತರೆ ಅನವಶ್ಯಕ ಶುಲ್ಕಗಳನ್ನು ಕೇಳಲಾಗುತ್ತದೆ. ಹಣ ಪಡೆದ ನಂತರ ಮೊಬೈಲ್ ಸಂಪರ್ಕ ಕಡಿತಗೊಳಿಸುವುದು ಅಥವಾ ಸುಳ್ಳು ಭರವಸೆ ನೀಡುತ್ತಾ ಕಾಲಹರಣ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಅನೇಕ ಮಧ್ಯಮ ವರ್ಗದ ಮತ್ತು ನಿರುದ್ಯೋಗಿ ಯುವಕರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಫ್ರಾಂಚೈಸಿ ವಂಚನೆಗಳ ಮಾದರಿಯು ಬಹುತೇಕ ಪಿರಮಿಡ್ ಯೋಜನೆ ಅಥವಾ ಮಲ್ಟಿ ಲೆವೆಲ್ ಮಾರ್ಕೆಟಿಂಗ್ ಹೋಲುತ್ತಿವೆ.

ನಿಜವಾದ ಉತ್ಪನ್ನ ಅಥವಾ ಸೇವೆಯ ಬದಲು, ಹೊಸ ಸದಸ್ಯರನ್ನು ಸೇರಿಸುವ ಮೂಲಕ ಹಣಗಳಿಸುವುದೇ ಇವರ ಮುಖ್ಯ ಉದ್ದೇಶವಾಗಿರುತ್ತದೆ. ದಿನನಿತ್ಯ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವುದು ಕಳವಳಕಾರಿ ವಿಷಯವಾಗಿದೆ. ನಕಲಿ ವೆಬ್ ಸೈಟ್‌ಗಳು, ಸುಳ್ಳು ಒಪ್ಪಂದ ಪತ್ರಗಳು ಮತ್ತು ಆಕರ್ಷಕ ಜಾಹೀರಾತುಗಳ ಮೂಲಕ ಜನರನ್ನು ವಂಚಿಸಲಾಗುತ್ತಿದೆ. ಈ ರೀತಿಯ ವಂಚನೆಗಳನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಫ್ರಾಂಚೈಸಿ ನೀಡುವ ಎಲ್ಲಾ ಕಂಪೆನಿಗಳ ಕಡ್ಡಾಯ ನೋಂದಣಿಯನ್ನು ಸರ್ಕಾರದ ಅಧಿಕೃತ ಪೋರ್ಟಲ್‌ನಲ್ಲಿ ನಡೆಸಿ ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಪರಿಶೀಲಿಸಬಹುದಾದ ವ್ಯವಸ್ಥೆ ಕಲ್ಪಿಸಬೇಕು. ಸೈಬರ್ ಕ್ರೈ ಠಾಣೆಯವರು ಇಂತಹ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ಮಾಡುವ ಸಂಬಂಧ ವಿಶೇಷ ತಂಡಗಳನ್ನು ರಚಿಸುವುದು ಅಗತ್ಯ.ಜೊತೆಗೆ, ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

14 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

16 hours ago