ಓದುಗರ ಪತ್ರ
ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ ನೀಡುವ ನೆಪದಲ್ಲಿ ದೊಡ್ಡ ಮೊತ್ತದ ನೋಂದಣಿ ಶುಲ್ಕ, ತರಬೇತಿ ಶುಲ್ಕ ಹಾಗೂ ಇತರೆ ಅನವಶ್ಯಕ ಶುಲ್ಕಗಳನ್ನು ಕೇಳಲಾಗುತ್ತದೆ. ಹಣ ಪಡೆದ ನಂತರ ಮೊಬೈಲ್ ಸಂಪರ್ಕ ಕಡಿತಗೊಳಿಸುವುದು ಅಥವಾ ಸುಳ್ಳು ಭರವಸೆ ನೀಡುತ್ತಾ ಕಾಲಹರಣ ಮಾಡುವುದು ಸಾಮಾನ್ಯವಾಗಿದೆ. ಇದರಿಂದ ಅನೇಕ ಮಧ್ಯಮ ವರ್ಗದ ಮತ್ತು ನಿರುದ್ಯೋಗಿ ಯುವಕರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಫ್ರಾಂಚೈಸಿ ವಂಚನೆಗಳ ಮಾದರಿಯು ಬಹುತೇಕ ಪಿರಮಿಡ್ ಯೋಜನೆ ಅಥವಾ ಮಲ್ಟಿ ಲೆವೆಲ್ ಮಾರ್ಕೆಟಿಂಗ್ ಹೋಲುತ್ತಿವೆ.
ನಿಜವಾದ ಉತ್ಪನ್ನ ಅಥವಾ ಸೇವೆಯ ಬದಲು, ಹೊಸ ಸದಸ್ಯರನ್ನು ಸೇರಿಸುವ ಮೂಲಕ ಹಣಗಳಿಸುವುದೇ ಇವರ ಮುಖ್ಯ ಉದ್ದೇಶವಾಗಿರುತ್ತದೆ. ದಿನನಿತ್ಯ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿರುವುದು ಕಳವಳಕಾರಿ ವಿಷಯವಾಗಿದೆ. ನಕಲಿ ವೆಬ್ ಸೈಟ್ಗಳು, ಸುಳ್ಳು ಒಪ್ಪಂದ ಪತ್ರಗಳು ಮತ್ತು ಆಕರ್ಷಕ ಜಾಹೀರಾತುಗಳ ಮೂಲಕ ಜನರನ್ನು ವಂಚಿಸಲಾಗುತ್ತಿದೆ. ಈ ರೀತಿಯ ವಂಚನೆಗಳನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಫ್ರಾಂಚೈಸಿ ನೀಡುವ ಎಲ್ಲಾ ಕಂಪೆನಿಗಳ ಕಡ್ಡಾಯ ನೋಂದಣಿಯನ್ನು ಸರ್ಕಾರದ ಅಧಿಕೃತ ಪೋರ್ಟಲ್ನಲ್ಲಿ ನಡೆಸಿ ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಪರಿಶೀಲಿಸಬಹುದಾದ ವ್ಯವಸ್ಥೆ ಕಲ್ಪಿಸಬೇಕು. ಸೈಬರ್ ಕ್ರೈ ಠಾಣೆಯವರು ಇಂತಹ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ಮಾಡುವ ಸಂಬಂಧ ವಿಶೇಷ ತಂಡಗಳನ್ನು ರಚಿಸುವುದು ಅಗತ್ಯ.ಜೊತೆಗೆ, ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…