Andolana originals

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ ಎಸಗಿದ ದ್ರೋಹವಾಗಿದೆ. ಗ್ರಾಹಕರಿಗೆ ಪ್ರತಿಯೊಂದು ಲೀಟರ್‌ನಲ್ಲಿ ೬೦ ರಿಂದ ೧೦೦ ಮಿ.ಲೀ. ವರೆಗೆ ಇಂಧನ ಕಡಿಮೆ ನೀಡಿ ದಿನನಿತ್ಯ ಬಹಿರಂಗ  ದರೋಡೆ ಮಾಡಲಾಗುತ್ತಿದೆ.

ಕೇವಲ ೧೦೧ ಬಂಕ್‌ಗಳ ಮೇಲೆ ಪ್ರಕರಣ ದಾಖಲಿಸಿ ೬.೬೬ ಲಕ್ಷ ರೂ. ದಂಡ ವಿಽಸಿರುವುದು ತೀರಾ ಕಣ್ಣೊರೆಸುವ ತಂತ್ರ. ೬೦೦೦ ಬಂಕ್‌ಗಳಿರುವ ರಾಜ್ಯದಲ್ಲಿ ಈ ಸಣ್ಣ ದಂಡದ ಮೊತ್ತವು ವಂಚಕರಿಗೆ ಯಾವುದೇ ಭಯ ಹುಟ್ಟಿಸುವುದಿಲ್ಲ. ಇಂತಹ ಲೂಟಿಕೋರ ಬಂಕ್‌ಗಳ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಬೇಕು. ಕೇವಲ ಸಣ್ಣಮೊತ್ತದ ದಂಡ ಹಾಕುವುದನ್ನು ಬಿಟ್ಟು, ವಂಚಕ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು. ರಾಜದ್ಯಂತ ನಿಯಮಿತ ಮತ್ತು ದಿಢೀರ್ ತಪಾಸಣೆಗಳು ನಡೆಯಬೇಕು. ಗ್ರಾಹಕರ ಜೇಬಿಗೆ ಕತ್ತರಿ ಹಾಕುವ ಇಂತಹ ಕೆಲಸ ಕೊನೆಗಾಣಿಸಲು ಸರ್ಕಾರ ಮುಂದಾಗಲಿ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 min ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago