ಓದುಗರ ಪತ್ರ
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ ಇಳಿಸಿದ್ದಾರೆ.
ವಿದ್ಯಾವಂತರಾದರೆ ಟಿಕೆಟ್ ಪರಿಶೀಲಿಸಿ ನಿರ್ವಾಹಕರಿಗೆ ತಿಳಿಸಿ ಉಚಿತ ಟಿಕೆಟ್ ಬದಲಾಯಿಸಿ ಮಾಮೂಲಿ ಟಿಕೆಟ್ ಪಡೆಯಬಹುದು. ಅದೇ ಹಳ್ಳಿಯವರಾದರೆ ಅವರು ಸುಮ್ಮನೆ ಟಿಕೆಟ್ ಅನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಟಿಕೆಟ್ ತಪಾಸಣಾ ಅಧಿಕಾರಿ ಬಂದರೆ ನಿರ್ವಾಹಕ ಮಾಡಿದ ತಪ್ಪಿಗೆ ಪ್ರಯಾಣಿಕರೂ ದಂಡ ಪಾವತಿಸಬೇಕಾಗುತ್ತದೆ. ಕೆಎಸ್ಆರ್ಟಿಸಿ ಅಧಿಕಾರಿಗಳು ಇಂತಹ ಅಕ್ರಮಗಳನ್ನು ಪತ್ತೆ ಹಚ್ಚುವ ಮೂಲಕ ನಿಗಮಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಪ್ರದೀಪ್ಕುಮಾರ್, ಕುವೆಂಪುನಗರ, ಮೈಸೂರು
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…