ಓದುಗರ ಪತ್ರ
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ ಇಳಿಸಿದ್ದಾರೆ.
ವಿದ್ಯಾವಂತರಾದರೆ ಟಿಕೆಟ್ ಪರಿಶೀಲಿಸಿ ನಿರ್ವಾಹಕರಿಗೆ ತಿಳಿಸಿ ಉಚಿತ ಟಿಕೆಟ್ ಬದಲಾಯಿಸಿ ಮಾಮೂಲಿ ಟಿಕೆಟ್ ಪಡೆಯಬಹುದು. ಅದೇ ಹಳ್ಳಿಯವರಾದರೆ ಅವರು ಸುಮ್ಮನೆ ಟಿಕೆಟ್ ಅನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಟಿಕೆಟ್ ತಪಾಸಣಾ ಅಧಿಕಾರಿ ಬಂದರೆ ನಿರ್ವಾಹಕ ಮಾಡಿದ ತಪ್ಪಿಗೆ ಪ್ರಯಾಣಿಕರೂ ದಂಡ ಪಾವತಿಸಬೇಕಾಗುತ್ತದೆ. ಕೆಎಸ್ಆರ್ಟಿಸಿ ಅಧಿಕಾರಿಗಳು ಇಂತಹ ಅಕ್ರಮಗಳನ್ನು ಪತ್ತೆ ಹಚ್ಚುವ ಮೂಲಕ ನಿಗಮಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಪ್ರದೀಪ್ಕುಮಾರ್, ಕುವೆಂಪುನಗರ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…