ಓದುಗರ ಪತ್ರ
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತ ದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ.
ಈ ಹಿಂದೆ ಒಂದೆರಡು ರಾಜ್ಯಗಳಿಗೆ ಸೀಮಿತವಾಗಿದ್ದ ಉಚಿತ ಕೊಡುಗೆಗಳು ಈಗ ದೇಶಾ ದ್ಯಂತ ಮತದಾರರನ್ನು ಸೆಳೆಯುವ ಅಸ್ತ್ರಗಳಂತೆ ಬಳಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹೇಗಾದರೂ ಸರಿ ಅಧಿಕಾರಕ್ಕೇರಲೇ ಬೇಕು ಎಂಬ ಉಮೇದಿನೊಂದಿಗೆ ರಾಜಕೀಯ ಪಕ್ಷಗಳು ಚುನಾವಣೆ ಪೂರ್ವದಲ್ಲಿ ಘೋಷಿಸುವ ಉಚಿತ ಕೊಡುಗೆಗಳು ಜಾರಿಗೆ ಬಂದರೆ ಅವುಗಳ ಹೊರೆಬೀಳುವುದು ತೆರಿಗೆದಾರರ ಮೇಲೆ ತಾನೆ? ಒಂದು ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಸಾರ್ವಜನಿಕರ ಹಣವನ್ನು ಈ ರೀತಿ ಬೇಕಾಬಿಟ್ಟಿ ಪೋಲು ಮಾಡುವುದು ಎಷ್ಟು ಸರಿ? ಎಂಬ ಬಗ್ಗೆ ಪರಾಮರ್ಶೆ ಆಗಬೇಕಿದೆ.
ಉಚಿತ ಘೋಷಣೆಗಳ ಜಾರಿಯಿಂದಾಗಿ ರಾಜ್ಯ ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಹಳ್ಳ ಹಿಡಿಯುತ್ತದೆ. ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಘೋಷಿಸುವ ಉಚಿತ ಕೊಡುಗೆಗಳಿಂದ ಆರ್ಥಿಕತೆಯ ಮೇಲಾಗುವ ಗಂಭೀರ ಪರಿಣಾಮಗಳನ್ನು ಅರಿತು ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳು ಒಂದು ಒಮ್ಮತದ ನಿರ್ಧಾರ ಕೈಗೊಳ್ಳುವುದು ತುರ್ತು ಅವಶ್ಯವಾಗಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…