Andolana originals

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತ ದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ.

ಈ ಹಿಂದೆ ಒಂದೆರಡು ರಾಜ್ಯಗಳಿಗೆ ಸೀಮಿತವಾಗಿದ್ದ ಉಚಿತ ಕೊಡುಗೆಗಳು ಈಗ ದೇಶಾ ದ್ಯಂತ ಮತದಾರರನ್ನು ಸೆಳೆಯುವ ಅಸ್ತ್ರಗಳಂತೆ ಬಳಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹೇಗಾದರೂ ಸರಿ ಅಧಿಕಾರಕ್ಕೇರಲೇ ಬೇಕು ಎಂಬ ಉಮೇದಿನೊಂದಿಗೆ ರಾಜಕೀಯ ಪಕ್ಷಗಳು ಚುನಾವಣೆ ಪೂರ್ವದಲ್ಲಿ ಘೋಷಿಸುವ ಉಚಿತ ಕೊಡುಗೆಗಳು ಜಾರಿಗೆ ಬಂದರೆ ಅವುಗಳ ಹೊರೆಬೀಳುವುದು ತೆರಿಗೆದಾರರ ಮೇಲೆ ತಾನೆ? ಒಂದು ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಸಾರ್ವಜನಿಕರ ಹಣವನ್ನು ಈ ರೀತಿ ಬೇಕಾಬಿಟ್ಟಿ ಪೋಲು ಮಾಡುವುದು ಎಷ್ಟು ಸರಿ? ಎಂಬ ಬಗ್ಗೆ ಪರಾಮರ್ಶೆ ಆಗಬೇಕಿದೆ.

ಉಚಿತ ಘೋಷಣೆಗಳ ಜಾರಿಯಿಂದಾಗಿ ರಾಜ್ಯ ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಹಳ್ಳ ಹಿಡಿಯುತ್ತದೆ. ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಘೋಷಿಸುವ ಉಚಿತ ಕೊಡುಗೆಗಳಿಂದ ಆರ್ಥಿಕತೆಯ ಮೇಲಾಗುವ ಗಂಭೀರ ಪರಿಣಾಮಗಳನ್ನು ಅರಿತು ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳು ಒಂದು ಒಮ್ಮತದ ನಿರ್ಧಾರ ಕೈಗೊಳ್ಳುವುದು ತುರ್ತು ಅವಶ್ಯವಾಗಿದೆ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago