ಓದುಗರ ಪತ್ರ
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತ ದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ.
ಈ ಹಿಂದೆ ಒಂದೆರಡು ರಾಜ್ಯಗಳಿಗೆ ಸೀಮಿತವಾಗಿದ್ದ ಉಚಿತ ಕೊಡುಗೆಗಳು ಈಗ ದೇಶಾ ದ್ಯಂತ ಮತದಾರರನ್ನು ಸೆಳೆಯುವ ಅಸ್ತ್ರಗಳಂತೆ ಬಳಕೆಯಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹೇಗಾದರೂ ಸರಿ ಅಧಿಕಾರಕ್ಕೇರಲೇ ಬೇಕು ಎಂಬ ಉಮೇದಿನೊಂದಿಗೆ ರಾಜಕೀಯ ಪಕ್ಷಗಳು ಚುನಾವಣೆ ಪೂರ್ವದಲ್ಲಿ ಘೋಷಿಸುವ ಉಚಿತ ಕೊಡುಗೆಗಳು ಜಾರಿಗೆ ಬಂದರೆ ಅವುಗಳ ಹೊರೆಬೀಳುವುದು ತೆರಿಗೆದಾರರ ಮೇಲೆ ತಾನೆ? ಒಂದು ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲು ಸಾರ್ವಜನಿಕರ ಹಣವನ್ನು ಈ ರೀತಿ ಬೇಕಾಬಿಟ್ಟಿ ಪೋಲು ಮಾಡುವುದು ಎಷ್ಟು ಸರಿ? ಎಂಬ ಬಗ್ಗೆ ಪರಾಮರ್ಶೆ ಆಗಬೇಕಿದೆ.
ಉಚಿತ ಘೋಷಣೆಗಳ ಜಾರಿಯಿಂದಾಗಿ ರಾಜ್ಯ ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಹಳ್ಳ ಹಿಡಿಯುತ್ತದೆ. ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಘೋಷಿಸುವ ಉಚಿತ ಕೊಡುಗೆಗಳಿಂದ ಆರ್ಥಿಕತೆಯ ಮೇಲಾಗುವ ಗಂಭೀರ ಪರಿಣಾಮಗಳನ್ನು ಅರಿತು ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳು ಒಂದು ಒಮ್ಮತದ ನಿರ್ಧಾರ ಕೈಗೊಳ್ಳುವುದು ತುರ್ತು ಅವಶ್ಯವಾಗಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…