ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಬಹುತೇಕ ರಸ್ತೆಗಳನ್ನು ಅಲ್ಪ ಸ್ವಲ್ಪ ವಿಸ್ತರಿಸಿ, ಹೆದ್ದಾರಿ ಹಣೆ ಪಟ್ಟಿ ನೀಡಿ ಟೋಲ್ ಸಂಗ್ರಹಿಸಲಾಗುತ್ತಿದೆ. ೨೦-೩೦ ವರ್ಷಗಳ ಹಿಂದೆ ಟೋಲ್ ಸಂಗ್ರಹ ಆದರ ನಿರ್ಮಾಣ ವೆಚ್ಚವನ್ನು ಆಧರಿಸಿ ೪- ೫ ವರ್ಷ ಎಂದು ನಿಗದಿಯಾಗಿರುತ್ತಿತ್ತು. ಅಲ್ಲದೆ ಈಗಿನಂತೆ ಪ್ರತಿ ವರ್ಷ ಟೋಲ್ ಶುಲ್ಕ ಏರಿಕೆ ಮಾಡುವ ಪದ್ಧತಿಯೂ ಇರಲಿಲ್ಲ. ಆದರೆ ಈಗಿನ ಕೇಂದ್ರ ಸರ್ಕಾರ ಪ್ರತಿ ವರ್ಷ ಏರಿಕೆ ಮಾಡುತ್ತಾ, ಟೋಲ್ ಸಂಗ್ರಹವನ್ನು ಇಂತಿಷ್ಟು ವರ್ಷ ಎಂದು ನಿಗದಿ ಮಾಡಿ ಜನರನ್ನು ಹಗಲು ದರೋಡೆ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ತನ್ನ ಧೋರಣೆಯನ್ನು ಬದಲಿಸಿ ಪ್ರಯಾಣಿಕ ಸ್ನೇಹಿಯಾಗಲಿ.
ಈಗಾಗಲೇ, ಟೋಲ್, ರಸ್ತೆ ತೆರಿಗೆ, ವಾಹನದ ಖರೀದಿ ಮೇಲಿನ ದುಬಾರಿ ಜಿ ಎಸ್ ಟಿ, ಪೆಟ್ರೋಲ್, ಡೀಸೆಲ್ ಮೇಲಿನ ದುಬಾರಿ ತೆರಿಗೆಗಳಿಂದ ಜನರು ಬಸವಳಿದಿದ್ದಾರೆ. ಆಡಳಿತಾರೂಢ ಸರ್ಕಾರಗಳು ಜನರ ಮೇಲಿನ ಹೊರೆ ತಗ್ಗಿಸಲು ಕಾಳಜಿ ವಹಿಸಬೇಕು.
-ಮುಳ್ಳೂರು ಪ್ರಕಾಶ್, ಮೈಸೂರು
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು…
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು…
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…