Categories: Andolana originals

ಓದುಗರ ಪತ್ರ: ಟೋಲ್‌ನಿಂದ ಮುಕ್ತಿ ಎಂದು?

ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಹೇಳಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಬಹುತೇಕ ರಸ್ತೆಗಳನ್ನು ಅಲ್ಪ ಸ್ವಲ್ಪ ವಿಸ್ತರಿಸಿ, ಹೆದ್ದಾರಿ ಹಣೆ ಪಟ್ಟಿ ನೀಡಿ ಟೋಲ್ ಸಂಗ್ರಹಿಸಲಾಗುತ್ತಿದೆ. ೨೦-೩೦ ವರ್ಷಗಳ ಹಿಂದೆ ಟೋಲ್ ಸಂಗ್ರಹ ಆದರ ನಿರ್ಮಾಣ ವೆಚ್ಚವನ್ನು ಆಧರಿಸಿ ೪- ೫ ವರ್ಷ ಎಂದು ನಿಗದಿಯಾಗಿರುತ್ತಿತ್ತು. ಅಲ್ಲದೆ ಈಗಿನಂತೆ ಪ್ರತಿ ವರ್ಷ ಟೋಲ್ ಶುಲ್ಕ ಏರಿಕೆ ಮಾಡುವ ಪದ್ಧತಿಯೂ ಇರಲಿಲ್ಲ. ಆದರೆ ಈಗಿನ ಕೇಂದ್ರ ಸರ್ಕಾರ ಪ್ರತಿ ವರ್ಷ ಏರಿಕೆ ಮಾಡುತ್ತಾ, ಟೋಲ್ ಸಂಗ್ರಹವನ್ನು ಇಂತಿಷ್ಟು ವರ್ಷ ಎಂದು ನಿಗದಿ ಮಾಡಿ ಜನರನ್ನು ಹಗಲು ದರೋಡೆ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ತನ್ನ ಧೋರಣೆಯನ್ನು ಬದಲಿಸಿ ಪ್ರಯಾಣಿಕ ಸ್ನೇಹಿಯಾಗಲಿ.

ಈಗಾಗಲೇ, ಟೋಲ್, ರಸ್ತೆ ತೆರಿಗೆ, ವಾಹನದ ಖರೀದಿ ಮೇಲಿನ ದುಬಾರಿ ಜಿ ಎಸ್ ಟಿ, ಪೆಟ್ರೋಲ್, ಡೀಸೆಲ್ ಮೇಲಿನ ದುಬಾರಿ ತೆರಿಗೆಗಳಿಂದ ಜನರು ಬಸವಳಿದಿದ್ದಾರೆ. ಆಡಳಿತಾರೂಢ ಸರ್ಕಾರಗಳು ಜನರ ಮೇಲಿನ ಹೊರೆ ತಗ್ಗಿಸಲು ಕಾಳಜಿ ವಹಿಸಬೇಕು.

-ಮುಳ್ಳೂರು ಪ್ರಕಾಶ್, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago